Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ 

Advertisement
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರವು ಆದೇಶ ನೀಡಿದ ತಕ್ಷಣ ಕೇಂದ್ರವು ಅಗತ್ಯ ಪ್ರಮಾಣದ ಅಕ್ಕಿಯನ್ನು ನೀಡುತ್ತದೆ ಎಂದು ಖಚಿತಪಡಿಸಿದ್ದಾರೆ.


ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ(ಒಎಂಎಸ್‌ಎಸ್) ಅಡಿಯಲ್ಲಿ ಅಕ್ಕಿಯನ್ನು ಪೂರೈಸಲು ಕೇಂದ್ರವು ಒಪ್ಪಿಗೆ ನೀಡಿದೆ. ಕಳೆದ ವಾರ ದೆಹಲಿಯಲ್ಲಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ಜೋಶಿ ನಡುವೆ ನಡೆದ ಸಭೆಯ ನಂತರ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಲಾಗಿದೆ.


ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಆದರೆ, ಕೇಂದ್ರದಿಂದ ಹೆಚ್ಚುವರಿ 5 ಕೆಜಿ ಸಿಗದ ಕಾರಣ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಯತ್ನ ನಡೆದಿತ್ತು, ನಂತರದಲ್ಲಿ ಹೆಚ್ಚುವರಿ 5ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ.


ರಾಜ್ಯವು ಕೆಜಿಗೆ 34 ರೂಪಾಯಿ ನೀಡುವುದಾಗಿ ಹೇಳುತ್ತಿದ್ದರೂ, ಭಾರತೀಯ ಆಹಾರ ನಿಗಮ(ಎಫ್‌ಸಿಐ) ಅಕ್ಕಿಯನ್ನು ಪೂರೈಸಲು ಕೇಂದ್ರವು ಅಡ್ಡಿಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಆರೋಪಿಸಿದ್ದರು. ಈ ವಿಚಾರವಾಗಿ ಕೇಂದ್ರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಯನ್ನೂ ನಡೆಸಲಾಗಿತ್ತು.


ಇದೀಗ ಕೇಂದ್ರದಿಂದ ಅಕ್ಕಿ ನೀಡಲು ಒಪ್ಪಿಗೆ ದೊರೆತಿದೆ. ಕಳೆದ ವರ್ಷ ದೇಶಾದ್ಯಂತ ಭೀಕರ ಬರಗಾಲದ ಹಿನ್ನೆಲೆಯಲ್ಲಿ ದಾಸ್ತಾನು ಕೊರತೆ ಆತಂಕದಿಂದಾಗಿ ಕೇಂದ್ರವು ಅಕ್ಕಿಯನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.


ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಮಾಸಿಕ 5 ಕೆಜಿ ಉಚಿತ ಅಕ್ಕಿ ನೀಡುವ ಭರವಸೆ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಪೂರೈಸಲು ಕರ್ನಾಟಕಕ್ಕೆ 2,36,000 ಟನ್ ಅಕ್ಕಿ ಅಗತ್ಯವಿದೆ.


ಕರ್ನಾಟಕದ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ದಾಸ್ತಾನನ್ನು ನಾವು ಖಚಿತಪಡಿಸಿದ್ದೇವೆ ಮತ್ತು ರಾಜ್ಯ ಸರ್ಕಾರವು ಆದೇಶವನ್ನು ನೀಡಿದರೆ ಅದನ್ನು ಪೂರೈಸಲು ಸಿದ್ಧರಿದ್ದೇವೆ. ಕಾರ್ಯಗತಗೊಳಿಸಲು ಸಾಕಷ್ಟು ಸ್ಟಾಕ್ ಇದೆ ಎಂದು ಜೋಶಿ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ