Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಷ್ಪಾರ್ಚನೆಯಿಂದ ವಿದ್ಯಾರ್ಥಿಗಳ ಸ್ವಾಗತಿಸಿದ ಕಾಲೇಜು ಆಡಳಿತ ಮಂಡಳಿ

Advertisement
ಸಿರುಗುಪ್ಪ : -ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ಶೈಕ್ಷಣ ಕ ವರ್ಷ ಪ್ರಾರಂಭದ ನಿಮಿತ್ತ ಕಾಲೇಜು ಆಡಳಿತ ಮಂಡಳಿಯಿಂದ ಜೂನ್.1, ಶನಿವಾರದಂದು ಪುಷ್ಪಾರ್ಚಣೆ ಮಾಡಿ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸ್ವಾಗತ ಮಾಡಿಕೊಳ್ಳಲಾಯಿತು.



ಕಾಲೇಜಿನ ಪ್ರಾಚಾರ್ಯರಾದ ಹೆಚ್.ನಾಗರಾಜ ಅವರು ಮಾತನಾಡಿ ಪ್ರಸಕ್ತ ಸಾಲಿನಿಂದ ಆದರ್ಶ ವಿಜ್ಞಾನ ಕಾಲೇಜ್ ಆಗಿ ಸರ್ಕಾರದಿಂದ ಉನ್ನತೀಕರಿಸಲಾಗಿದ್ದು, ಪ್ರಯೋಗಾಲಯಗಳು, ಉಚಿತ ಕೋಚಿಂಗ್, ಆನ್‌ಲೈನ್ ಕೋಚಿಂಗ್ ನೀಡಲಾಗುತ್ತಿದೆ.



ಸದ್ಯ ನಮ್ಮ ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಅದರೊಂದಿಗೆ ಕೌಶಲ್ಯಾಧಾರಿತ ಐ.ಟಿ ಮತ್ತು ಆಟೋ ಮೊಬೈಲ್ ಕೋರ್ಸ್ ಗಳಿಗೆ ನಮ್ಮ ಕಾಲೇಜಿನಲ್ಲಿ ದಾಖಲಾತಿ ಲಭ್ಯವಿರುತ್ತದೆ. ಕಳೆದ ಸಲ ಖಾಸಗಿ ಕಾಲೇಜಿಗಿಂತಲೂ ಉತ್ತಮ ಪಲಿತಾಂಶವನ್ನು ನಮ್ಮ ವಿದ್ಯಾರ್ಥಿಗಳು ಪಡೆದಿರುತ್ತಾರೆ.

ಖಾಸಗಿ ಕಾಲೇಜಿಗಿಂತಲೂ ಉತ್ತಮ ಅನುಭವವುಳ್ಳ ಉಪನ್ಯಾಸಕರು ಸರ್ಕಾರಿ ಕಾಲೇಜಿನಲ್ಲಿದ್ದು ಉತ್ತಮ ಗುಣಮಟ್ಟದ ಶಿಕ್ಷಣವು ಸಿಗಲಿದೆ. ನಮ್ಮಲ್ಲಿ ವಿಜ್ಞಾನ ವಿಭಾಗದ ಜೊತೆ ಕಂಪ್ಯೂಟರ್ ವಿಜ್ಞಾನ ವಿಭಾಗ ಕೋರ್ಸಿಗೂ ದಾಖಲೆ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೋಷಕರು ತಮ್ಮ ಮಕ್ಕಳನ್ನು ದಾಖಲಾತಿ ಮಾಡಿಸಬೇಕೆಂದರು.

ಇದೇ ವೇಳೆ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಆರ್. ಸದಾಶಿವಪ್ಪ, ಉಪನ್ಯಾಸಕರಾದ ಸೋಮಶೇಖರರೆಡ್ಡಿ, ಹರಿಪ್ರಸಾದ್, ಮಲ್ಲಿಕಾರ್ಜುನ, ಅತಿಥಿ ಉಪನ್ಯಾಸಕರಾದ ಚಿದಾನಂದಪ್ಪ, ನಾಗರಾಜ, ದೇವರಾಜ, ಸೈಯದ್ ಅಬಿದ, ಕಾಂತಣ್ಣ ಹಾಗೂ ವಿದ್ಯಾರ್ಥಿಗಳು ಇದ್ದರು.

ವರದಿ:-ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ