Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯಾಚಾರಕ್ಕೆ ಸಹಕರಿಸಿದ್ರೇ ಮಹಿಳೆಗೂ ಶಿಕ್ಷೆ : ಹೈಕೋರ್ಟ್

Advertisement
ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಹಿಳೆಯಿಂದ ರೇಪ್ ಸಾಧ್ಯವಿಲ್ಲದಿದ್ದರೂ, ರೇಪ್‌ಗೆ ಸಹಕರಿಸಿದರೆ ಆಕೆಗೆ ಶಿಕ್ಷೆಯಾಗಲಿದೆ ಎಂದು ಹೇಳಿದೆ. ರೇಪ್ ಪ್ರಕರಣದಲ್ಲಿ ಆರೋಪಿಯ ತಾಯಿ ಮತ್ತು ಸಹೋದರನನ್ನು ವಿಚಾರಣೆಗೊಳಪಡಿಸಿದ ಹೈಕೋರ್ಟ್ ಈ ತೀರ್ಪು ನೀಡಿದೆ.

ಭೋಪಾಲ್‌ನಲ್ಲಿ 2022ರ ಆಗಸ್ಟ್ 21ರಂದು ದಾಖಲಾದ ಎಫ್‌ಐಆರ್‌ನಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ದೂರಿನಲ್ಲಿ, ಆರೋಪಿ ತನ್ನ ಪ್ರೇಯಸಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಆತನ ತಾಯಿ ಮತ್ತು ಸಹೋದರ ಇದಕ್ಕೆ ಸಹಕರಿಸಿದ್ದಾರೆ ಎಂದು ಹೇಳಲಾಗಿತ್ತು.

ವಿಚಾರಣೆ ವೇಳೆ, ಆರೋಪಿಯ ತಾಯಿ ಮತ್ತು ಸಹೋದರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದರು. ಅಲ್ಲದೇ, ಮದುವೆಗೂ ಮುಂಚೆ ದೈಹಿಕ ಸಂಬಂಧ ಸಾಮಾನ್ಯ ಎಂದು ಹೇಳಿ ಈ ಕೃತ್ಯಕ್ಕೆ ಪ್ರಚೋದನೆ ನೀಡಿದ್ದರು ಎಂದು ಹೇಳಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮಹಿಳೆಯಿಂದ ರೇಪ್ ಸಾಧ್ಯವಿಲ್ಲ. ಆದರೆ, ರೇಪ್‌ಗೆ ಸಹಕರಿಸಿದರೆ ಆಕೆಗೆ ಐಪಿಸಿ ಸೆಕ್ಷನ್ 109ರ ಅಡಿ ಶಿಕ್ಷೆಯಾಗಲಿದೆ ಎಂದು ಹೇಳಿದೆ. ಈ ಪ್ರಕರಣದಲ್ಲಿ, ಆರೋಪಿಯ ತಾಯಿ ಮತ್ತು ಸಹೋದರ ರೇಪ್‌ಗೆ ಸಹಕರಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 376, 506-II ಮತ್ತು 190ರ ಅಡಿ ಪ್ರಕರಣ ದಾಖಲಿಸಲು ಸೂಚಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ