Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಭೂಮಿ ರಕ್ಷಿಸಿ ಅಕ್ರಮ ಸಾಗುವಳಿ ನಿಲ್ಲಿಸಿ ತಹಶೀಲ್ದಾರರ ವಿರುದ್ಧ ಸಿಡಿದೆದ್ದ ಕೆ ಆರ್ ಎಸ್ ಪಕ್ಷ

Advertisement
 ಹುಕ್ಕೇರಿ :- ಇಂದಿನ ಪತ್ರಿಕಾ ಗೋಷ್ಟಿಯ ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಸಿಂಧನೂರು ತಾಲೂಕಿನ ತುರ್ವಿಹಾಳ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿಕ್ಕ ಬೇರಿಗೆ ಗ್ರಾಮದ ಜಮೀನು ಸರ್ವೆ ನಂಬರ್ 10 /*/* ಕ್ಷೇತ್ರ 40 ಎಕ್ಕರೆ 18 ಗುಂಟೆ ಪರಂಪೋಕ್ ಜಮೀನಿದ್ದು ಮತ್ತು ಜಮೀನು ಸರ್ವೆ ನಂಬರ್ 96/*/ ಎಕ್ಕರೆ ಖಾರಿಜಾತ ಜಮೀನಿದ್ದು ಈ ಜಮೀನುಗಳು ಸರ್ಕಾರಿ ಜಮೀನುಗಳಾಗಿದ್ದು ಇಲ್ಲಿ ಕುರಿಗಾಗಿ ದನಗಾಯಿಗಳು ತಮ್ಮ ತಮ್ಮ ರಾಸುಗಳನ್ನು ಮೇಯಲು ಅನುಕೂಲವಾಗುತ್ತದೆ ಎಂದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ ಆಗಿರುತ್ತದೆ.

ಈ ಮಧ್ಯದಲ್ಲಿ ಅರಣ್ಯ ಇಲಾಖೆಯವರು ಈ ಜಮೀನನ್ನುಗಳಲ್ಲಿ ಅನಧಿಕೃತವಾಗಿ ಪ್ರವೇಶ ಮಾಡಿದ್ದು ಅಲ್ಲದೆ ಅಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಿದ್ದು ನಮ್ಮ ಪಕ್ಷದ ವತಿಯಿಂದ ತಹಸಿಲ್ದಾರರು ಸಿಂಧನೂರಿಗೆ ದೂರನ್ನು ನೀಡಿದ್ದು ಅವರು ಅದಕ್ಕೆ ಸ್ಪಂದನೆ ಮಾಡಿ ಅರಣ್ಯ ಇಲಾಖೆಯವರಿಗೆ ಪತ್ರ ಬರೆದಿದ್ದು ಪತ್ರ ಸಂಖ್ಯೆ ಸಂ/ಕಂ/ಎಂಎ. ಬಿ/ಅರಣ್ಯ/71/22-23 ದಿನಾಂಕ 29-09-2022 ಇದ್ದು ಅರಣ್ಯ ಇಲಾಖೆಯವರಿಗೆ ಸ್ಪಷ್ಟವಾಗಿ ಈ ಜಮೀನುಗಳು ಕಂದಾಯ ಇಲಾಖೆಗೆ ಸೇರಿದ್ದು ಈ ಜಮೀನುಗಳಲ್ಲಿ ರಾಸುಗಳಿಗೆ ಮೇಯಲು ತೊಂದರೆಯಾಗಬಾರದು ಮತ್ತು ಈಗಾಗಲೇ ನೆಟ್ಟಿರುವ ಸಸಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಮಾತ್ರ ಸೂಚಿಸಿದ್ದು ಇರುತ್ತದೆ.

ಆದರೆ ಈಗ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಜಮೀನುಗಳನ್ನು ಅನಧಿಕೃತವಾಗಿ ತಮ್ಮ ವಶಕ್ಕೆ ತೆಗೆದುಕೊಂಡು ಸಾಗುವಳಿ ಮಾಡುತ್ತಿರುವುದು ಈ ವಿಷಯವನ್ನು ಕೂಡ ದಿನಾಂಕ 17.05.2024 ರಂದು ನಮ್ಮ ಪಕ್ಷದ ವತಿಯಿಂದ ತಹಶೀಲ್ದಾರರಿಗೆ ಮನವಿಯ ಮೂಲಕ ಅವರ ಗಮನಕ್ಕೆ ತರಲಾಗಿದೆ. ಆದರೆ ಈ ವಿಷಯವಾಗಿ ಅವರಿಂದ ಈವರೆಗೂ ಕ್ರಮ ಜರುಗಿಸಿರುವುದಿಲ್ಲ ಅಂದರೆ ಇಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಲು ಕಂದಾಯ ಇಲಾಖೆ ಎಲ್ಲಾ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಈ ಪಟ್ಟ-ಭದ್ರ ಹಿತಾಸಕ್ತಿ ಅವರೊಂದಿಗೆ ಶಾಮಿಲ್ ಆಗಿರುವ ಶಂಕೆ ಉಂಟಾಗಿದೆ ಈಗಾಗಲೇ ಅನಧಿಕೃತವಾಗಿ ಈ ಜಮೀನುಗಳಲ್ಲಿ ಪ್ರವೇಶ ಮಾಡಿದವರು ಯಾರ ಅನುಮತಿ ಇಲ್ಲದೆ ಗಿಡಗಂಟೆಗಳನ್ನು ಕಡಿದು ಹಾಕಿ ಈ ಜಮೀನುಗಳಲ್ಲಿ ಪರಿಸರ ನಾಶ ಮಾಡಿದ್ದಾರೆ. ಇದು ಕಾಯ್ದೆಗೆ ವಿರುದ್ಧವಾಗಿದ್ದು ಕಾಯ್ದೆ ಪ್ರಕಾರ ಇವರ ವಿರುದ್ಧ ಕ್ರಮ ಜರುಗಿಸುವುದು ಕೂಡ ಅವಶ್ಯಕವಾಗಿದೆ

ಒಂದು ವಾರದೊಳಗಾಗಿ ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆ ಇತರೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಜರುಗಿಸಿದೆ ಹೋದಲ್ಲಿ ಮತ್ತು ಅನಧಿಕೃತವಾಗಿ ಪ್ರವೇಶ ಮಾಡಿದವರು ವಿರುದ್ಧ ಕ್ರಮ ಜರುಗಿಸಿದೆ ಇದ್ದಲ್ಲಿ ಚಿಕ್ಕ ಬೇರಿಗೆ ಗ್ರಾಮದ ಕುರಿಗಾಹಿಗಳ ಕುರಿಗಳೊಂದಿಗೆ ಮತ್ತು ಧನಗಾಯಿಗಳ ದನಗಳೊಂದಿಗೆ ಸಿಂಧನೂರು ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಈ ಪತ್ರಿಕೆಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿರುಪಾದಿ ಕೆ ಗೋಮರ್ಸಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಯಚೂರು ಜಿಲ್ಲಾ ಯುವ ಘಟಕದ ಕಾರ್ಯದರ್ಶಿ, ದ್ಯಾವಣ್ಣ ನಾಯಕ್ ಪುಲದಿನ್ನಿ ಪ್ರಧಾನ ಕಾರ್ಯದರ್ಶಿ ಅಯ್ಯಪ್ಪ ಮೇಟಿ ತಾಲೂಕ ಸಂಘಟನಾ ಕಾರ್ಯದರ್ಶಿ ಅಜಿದ್ ಪಾಷಾ ಹಾಗೂ ಪಕ್ಷದ ಮುಖಂಡರಾದ ಶರಣಪ್ಪ ಬೇರ್ಗಿ ,ಬೀರಪ್ಪ,ಸೋಮಣ್ಣ, ಶಿವಗ್ಯಾನಪ್ಪ ಮತ್ತಿತರರು ಉಪಸ್ಥಿತರಿದ್ದರು.

ವರದಿ:- ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ