Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 91,152 ಅನರ್ಹರ ಪಿಂಚಣಿ ತಕ್ಷಣದಿಂದಲೇ ರದ್ದು : ರಾಜ್ಯ ಸರ್ಕಾರ ಆದೇಶ 

Advertisement

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುವ ಪಿಂಚಣಿ (Pension) ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರವೇ ಸರ್ಕಾರದ ಸೌಲಭ್ಯ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕಂದಾಯ ಇಲಾಖೆಯು ಮಹತ್ವದ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯಾದ್ಯಂತ ಪ್ರಸ್ತುತ ಒಟ್ಟು 83,11,493 ಫಲಾನುಭವಿಗಳು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ, ಇಲಾಖೆಯು ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ ಬರೋಬ್ಬರಿ 23,13,664 ಫಲಾನುಭವಿಗಳ ವಿವರಗಳು ಸಂದೇಹಾಸ್ಪದವಾಗಿ ಕಂಡುಬಂದಿದ್ದು, ಈ ಖಾತೆಗಳನ್ನು ಪ್ರಸ್ತುತ 'ಸಂಯೋಜನೆ' ಮೊಬೈಲ್ ಆಯಪ್ ಮೂಲಕ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.

63 ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಮೇ-2026ರ ಪಿಂಚಣಿ ಪಾವತಿ

ತಪಾಸಣೆಯ ನಡುವೆಯೂ ಅರ್ಹ ಬಡ ಜನರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.

 ಸಂದೇಹಾಸ್ಪದವೆಂದು ಗುರುತಿಸಲಾಗಿದ್ದ ಖಾತೆಗಳ ಪೈಕಿ, ಗ್ರಾಮ ಆಡಳಿತ ಅಧಿಕಾರಿಗಳು (VA) ಸ್ವತಃ ಸ್ಥಳ ಪರಿಶೀಲನೆ ನಡೆಸಿ ಅರ್ಹರೆಂದು ವರದಿ ಮಾಡಿದ 3,35,610 ಫಲಾನುಭವಿಗಳು ಸೇರಿದಂತೆ ರಾಜ್ಯದ ಒಟ್ಟು 63,04,554 ಅರ್ಹ ಫಲಾನುಭವಿಗಳಿಗೆ ಮೇ-2026 ರ ಮಾಹೆಯವರೆಗಿನ ಪಿಂಚಣಿಯನ್ನು ಯಶಸ್ವಿಯಾಗಿ ಪಾವತಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ನಕಲಿ ದಾಖಲೆ ನೀಡಿದ್ದ 91,152 ಅನರ್ಹರ ಪಿಂಚಣಿ ತಕ್ಷಣ ರದ್ದು!

ಪಿಂಚಣಿ ಮಂಜೂರಾತಿ ಸಮಯದಲ್ಲಿ ವಯಸ್ಸಿನ ದೃಢೀಕರಣದ ಬಗ್ಗೆ ತಪ್ಪು ಮಾಹಿತಿ ನೀಡಿದ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾನೂನುಬಾಹಿರವಾಗಿ ಸರ್ಕಾರದ ಹಣವನ್ನು ಪಡೆಯುತ್ತಿದ್ದ 91,152 ಅನರ್ಹ ಫಲಾನುಭವಿಗಳನ್ನು ತನಿಖೆಯ ವೇಳೆ ಪತ್ತೆಹಚ್ಚಲಾಗಿದೆ.

ಇಂತಹ ವಂಚಕರ ಪಿಂಚಣಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ರದ್ದುಗೊಳಿಸಲು ತೀರ್ಮಾನಿಸಲಾಗಿದೆ.

16.42 ಲಕ್ಷ ಫಲಾನುಭವಿಗಳ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಕೆಗೆ 30 ದಿನಗಳ ಅಂತಿಮ ಅವಕಾಶ

ಗ್ರಾಮ ಆಡಳಿತ ಅಧಿಕಾರಿಗಳ ಭೌತಿಕ ಪರಿಶೀಲನೆಯ ಸಮಯದಲ್ಲಿ ಯಾವುದೇ ಅಧಿಕೃತ ದಾಖಲೆಗಳನ್ನು ಹಾಜರುಪಡಿಸಲು ವಿಫಲರಾದ, ಇಲಾಖೆಗೆ ನೀಡಲಾದ ವಿಳಾಸದಲ್ಲಿ ವಾಸವಿಲ್ಲದ ಹಾಗೂ ನಿಗದಿತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಒಟ್ಟು 16,42,303 ಫಲಾನುಭವಿಗಳ ಪಿಂಚಣಿಯನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.

ಆದರೆ, ಇವರಲ್ಲಿ ಯಾರಾದರೂ ನಿಜವಾದ ಅರ್ಹರಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಲು ಕಂದಾಯ ಇಲಾಖೆಯು ಅಂತಿಮ ಅವಕಾಶವೊಂದನ್ನು ಕಲ್ಪಿಸಿದೆ:

ನೋಟಿಸ್ ಜಾರಿ: ದಾಖಲೆಗಳ ಕೊರತೆಯಿಂದಾಗಿ ಪಿಂಚಣಿ ಸ್ಥಗಿತಗೊಂಡಿರುವ 16,42,303 ಫಲಾನುಭವಿಗಳಿಗೆ ಸಂಬಂಧಪಟ್ಟ ತಹಸೀಲ್ದಾರರ ಮೂಲಕ ಸೂಕ್ತ ತಿಳುವಳಿಕೆ ಪತ್ರ (ನೋಟಿಸ್) ನೀಡಲು ಆದೇಶಿಸಲಾಗಿದೆ.

30 ದಿನಗಳ ಕಾಲಾವಕಾಶ: ನೋಟಿಸ್ ತಲುಪಿದ ನಂತರ, ಫಲಾನುಭವಿಗಳು ತಮ್ಮ ಅರ್ಹತಾ ದಾಖಲೆಗಳನ್ನು ಸಲ್ಲಿಸಲು 30 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

 

 

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST