Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಗಮ ಸಂಚಾರಕ್ಕೆ ಪೋಲೀಸ್ ಇಲಾಖೆಯಿಂದ ಅನುವು

Advertisement
ಸಿರುಗುಪ್ಪ :- ನಗರದ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ ಹತ್ತಿರದ ಹೂವು ಮತ್ತು ಹಣ್ಣು ಇನ್ನಿತರ ವ್ಯಾಪಾರದ ತಳ್ಳುಗಾಡಿಗಳನ್ನು ಹಿಂದಕ್ಕೆ ಸರಿಸಿದ ಪೋಲೀಸ್ ಇಲಾಖೆಯು ಇಟ್ಟಿಗೆಗಳಿಂದ ಗಡಿಯನ್ನು ನಿರ್ಮಿಸಿ ರಸ್ತೆಯ ಬಳಿ ಬಾರದಂತೆ ಸೂಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.



ನಮ್ಮ ತಳ್ಳುಗಾಡಿಗಳು ಇದ್ದಲ್ಲೇ ಇರುತ್ತವೆ ಸಾರ್ ಬೇರೆ ಕಡೆಯಿಂದ ವಾಹನಗಳಲ್ಲಿ ಬಂದು ತರಕಾರಿ ಮತ್ತು ಹಣ್ಣು ಮಾರುವವರಿಂದ ತೊಂದರೆಯಾಗುತ್ತಿದೆ ಎಂದು ಬೀದಿ ಬದಿ ವ್ಯಾಪಾರಿಗಳು ತಿಳಿಸಿದರು.



ಪಿ.ಎಸ್.ಐ ಪರಶುರಾಮ ಅವರು ಮಾತನಾಡಿ ವ್ಯಾಪಾರದ ಪೈಪೋಟಿಯಿಂದಾಗಿ ತಳ್ಳು ಗಾಡಿಯ ವ್ಯಾಪಾರಿಗಳು ರಸ್ತೆಯ ಪಕ್ಕಕ್ಕೆ ಬಂದು ನಿಲ್ಲುವ ಕಾರಣ ಗ್ರಾಹಕರು ರಸ್ತೆಯ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸಿ ಖರೀದಿಸುವುದರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿರುವ ಕಾರಣ ಸಾರ್ವಜನಿಕರ ಹಿತಾದೃಷ್ಟಿಯಿಂದಾಗಿ ತಳ್ಳುಗಾಡಿಗಳನ್ನು ಹಿಂದಕ್ಕೆ ಸರಿಸಲಾಗಿದೆ.

ಬಸ್ ನಿಲ್ದಾಣ ಮತ್ತು ತರಕಾರಿ ಮಾರುಕಟ್ಟೆಗೆ ಬರುವ ಸಾರ್ವಜನಿಕರಿಗೆ ಸದಾ ಕಿರಿಕಿರಿಯಾಗುತ್ತಿದ್ದ ಪರಿಣಾಮ ಸಂಚಾರ   ಸುಗಮಗೊಳಿಸಲಾಗಿದೆ.ಖಾಸಗಿ ಬಸ್ ನಿಲುಗಡೆಯ ತೆರವಿಗಾಗಿ ಸಂಬಂದಪಟ್ಟ ಸಾರಿಗೆ ಅಧಿಕಾರಿಗಳಿಂದ ದೂರು ಅಥವಾ ಮನವಿ ಸಲ್ಲಿಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದರು.

ಸರ್ಕಾರಿ ಬಸ್ ನಿಲ್ದಾಣದ ಹತ್ತಿರ ರಸ್ತೆಗೆ ಅಡ್ಡಲಾಗಿ ನಿಲ್ಲುವ ಖಾಸಗಿ ಬಸ್‌ಗಗಳಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುವ ಬಗ್ಗೆ ಸಾರ್ವಜನಿಕರು ಆರೋಪಿಸಿದರು.ಈ ಬಗ್ಗೆ ವ್ಯಪಸ್ಥಾಪಕ ತಿರುಮಲೇಶ ಅವರು ಪ್ರತಿಕ್ರಿಯಿಸಿ ನಿಲ್ದಾಣದ ಬಳಿ ನಿಲ್ಲುವ ಖಾಸಗಿ ಬಸ್‌ಗಳ ನಿಲುಗಡೆಯನ್ನು ತೆರವುಗೊಳಿಸುವಂತೆ ಈಗಾಗಲೇ ಮೂರು ಬಾರಿ ಮನವಿ ಮಾಡಲಾಗಿದ್ದು ಮತ್ತೊಮ್ಮೆ ಮನವಿ ಮಾಡಲಾಗುವುದೆಂದರು.

ವರದಿ .ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ