Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

Advertisement
------------------------------------ಸಿಎಂ ಸಿದ್ದರಾಮಯ್ಯ ಅವರಿಂದ ಟ್ವೀಟ್ ಮೂಲಕ ಅಭಿನಂದನೆ

ಹಾಸನಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್  ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್ ಲ್ಯಾಂಪ್’ ಎಂಬ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹಾಗಾಗಿ ಕರುನಾಡಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಮಂಗಳವಾರ ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದು ಒಳಗೊಂಡಿದೆ.

ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್​​ ಅವರು ಮೂಲತಃ ಹಾಸನದವರು. ಇತ್ತೀಚೆಗೆ ಅಂದರೆ ಫೆಬ್ರುವರಿಯಲ್ಲಿ ಅವರು ಕೃತಿ ಲಾಂಗ್ ಲಿಸ್ಟ್​​ನಲ್ಲಿ ಆಯ್ಕೆಯಾಗಿತ್ತು. ಬಳಿಕ ಏಪ್ರಿಲ್ 8 ರಂದು ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿತ್ತು.

12 ಕತೆಗಳನ್ನು ಒಳಗೊಂಡ ‘ಹಸೀನಾ ಮತ್ತು ಇತರೆ ಕತೆಗಳು’ ಎಂಬ ಕೃತಿಯನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಪ್​​ಗೆ ಅನುವಾದ ಮಾಡಿದ್ದಾರೆ. ಸಾಕಷ್ಟು ಕೃತಿಗಳು ಬೂಕರ್ ಪ್ರಶಸ್ತಿಗೆ ನಿರ್ದೇಶಿತವಾಗಿದ್ದವು. ಅದರಲ್ಲಿ ಒಟ್ಟು 153 ಕೃತಿಗಳು ಲಾಂಗ್​ ಲಿಸ್ಟ್ ನಲ್ಲಿ ಸ್ಥಾನ ಪಡೆದಿದ್ದವು. ಅಂತಿಮವಾಗಿ ಶಾರ್ಟ್ ಲಿಸ್ಟ್​ನಲ್ಲಿ ಆರು ಕೃತಿಗಳು ಸ್ಥಾನ ಪಡೆದಿದ್ದವು.

ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಅನುವಾದಕಿ ದೀಪಾ ಭಸ್ತಿ ಅವರೊಂದಿಗೆ ಹಿರಿಯ ಸಾಹಿತಿ ಬಾನು ಮುಷ್ತಾಕ್ ಪ್ರಶಸ್ತಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಗೆಲುವನ್ನು ವೈವಿಧ್ಯತೆಯ ಗೆಲುವು ಎಂದು ಬಣ್ಣಿಸಿದ್ದಾರೆ. ‘ಯಾವುದೇ ಕಥೆ ಸಣ್ಣದಲ್ಲ, ಅನುಭವವೆಂಬ ವಸ್ತ್ರದ ಪ್ರತಿಯೊಂದು ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದ ಈ ಪುಸ್ತಕ ರಚಿಸಲಾಗಿದೆ’ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಇನ್ನು ಅನುವಾದಕಿ ದೀಪಾ ಭಸ್ತಿ ಅವರು ಮಾತನಾಡಿ, ‘ನನ್ನ ಸುಂದರ ಭಾಷೆಗೆ ದೊರೆತ ಎಂತಹ ಸುಂದರ ಗೆಲುವು’ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್: ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡುವ ಮೂಲಕ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ