Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ ಐಪಿಎಲ್ ಪಂದ್ಯಾವಳಿ ಆರಂಭ

Advertisement
ನಾಳೆಯಿಂದ ದೇಶದಲ್ಲಿ ಇಂಡಿಯನ್​ ಪ್ರೀಮಿಯರ್​​ ಲೀಗ್​ (IPL) ಹಬ್ಬ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​​ ಕೋಲ್ಕತ್ತಾ ನೈಟ್​ ರೈಡರ್ಸ್​ (KKR) ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿವೆ. ಈ ಪಂದ್ಯಕ್ಕೆ ಕೋಲ್ಕತ್ತಾದ ಈಡನ್​ ಗಾರ್ಡನ್ಸ್‌​ ಮೈದಾನ ಆತಿಥ್ಯ ವಹಿಸುತ್ತಿದೆ.

ಎರಡೂ ತಂಡಗಳು ಹೊಸ ನಾಯಕರೊಂದಿಗೆ ಕಣಕ್ಕಿಳಿಯುತ್ತಿವೆ. ಆರ್​ಸಿಬಿಯನ್ನು ಮುನ್ನಡೆಸುವ ಜವಾಬ್ದಾರಿ ರಜತ್​ ಪಾಟೀದರ್​ ಕೈಯಲ್ಲಿದ್ದರೆ, ಕೆಕೆಆರ್​ ತಂಡವನ್ನು ಹಿರಿಯ ಮತ್ತು ಅನುಭವಿ ಆಟಗಾರ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

ದೂರಾದ RCB ಆತಂಕ​: IPL ಪ್ರಾರಂಭಕ್ಕೂ ಮುನ್ನವೇ ಆರ್​ಸಿಬಿ ಎಡಗೈ ಬ್ಯಾಟರ್​​ ಫಾರ್ಮ್​ಗೆ ಮರಳಿದ್ದಾರೆ. ಕಳೆದ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಟೀಕೆಗೆ ಗುರಿಯಾಗಿದ್ದ​ ದೇವದತ್​ ಪಡಿಕ್ಕಲ್​​ ಅವರನ್ನು ಈ ಬಾರಿ ನಂಬಿಕೆ ಇರಿಸಿ ಆರ್​ಸಿಬಿ, ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ಟೂರ್ನಿ ಪ್ರಾರಂಭಕ್ಕೂ ಮೊದಲೇ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪಡಿಕ್ಕಲ್, ಆರ್​ಸಿಬಿ ಇಟ್ಟ ನಂಬಿಕೆ ಉಳಿಸಿಕೊಂಡಿದ್ದಾರೆ. ಕೇವಲ 48 ಎಸೆತಗಳಲ್ಲಿ 82 ರನ್​ ಸಮೇತ ಅರ್ಧಶತಕ ಪೇರಿಸಿದ್ದಾರೆ. ಇದರೊಂದಿಗೆ ಫಾರ್ಮ್​ಗೆ ಮರಳಿರುವ ಸೂಚನೆ ನೀಡಿದ್ದಾರೆ.

5 ವರ್ಷಗಳ ಹಿಂದೆ IPL ಜರ್ನಿ ಪ್ರಾರಂಭದೇವದತ್​ ಪಡಿಕ್ಕಲ್ ಐದು ವರ್ಷಗಳ ಹಿಂದೆ ತಮ್ಮ ಐಪಿಎಲ್ ವೃತ್ತಿಜೀವನ ಪ್ರಾರಂಭಿಸಿದ್ದರು. ಆರ್‌ಸಿಬಿ ಪರ IPLಗೆ ಪಾದಾರ್ಪಣೆ ಮಾಡಿರುವ ಅವರು ಮೊದಲ ಸೀಸನ್‌ನಲ್ಲಿ 15 ಪಂದ್ಯಗಳಲ್ಲಿ 31.53 ಸರಾಸರಿಯಲ್ಲಿ 473 ರನ್ ಗಳಿಸಿದರು. ಇದರಲ್ಲಿ ಐದು ಅರ್ಧಶತಕಗಳು ಸೇರಿವೆ.

ಮುಂದಿನ ಆವೃತ್ತಿಯಲ್ಲಿಯೂ ಆರ್‌ಸಿಬಿ ಪರ ಆಡುವುದನ್ನು ಮುಂದುವರೆಸಿದ ಪಡಿಕ್ಕಲ್, ಶತಕ ಸೇರಿದಂತೆ 31.61 ಸರಾಸರಿಯಲ್ಲಿ 411 ರನ್ ಪೇರಿಸಿದರು. ಬಳಿಕ ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು. 2022ರಲ್ಲಿ ರಾಜಸ್ಥಾನ ರಾಯಲ್ಸ್​ ಪರ ಆಡಿದ್ದರು. 2024ರಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಪರ ಆಡಿದ್ದರೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ