Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರ ಶೇ.12.50 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ 

Advertisement

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

KSRTC, BMTC, KKRTC, NWKRTC ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು ವೇತನ ಹೆಚ್ಚಳ ಮಾಡಿದೆ.

2025ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಿಸಲಾಗಿದೆ.ಮಾರ್ಚ್ 31, 2025ರ ಅಂತ್ಯಕ್ಕೆ ನೌಕರರು ಪಡೆಯುತ್ತಿದ್ದ ಮೂಲವೇತನಕ್ಕೆ ಈ ಹೆಚ್ಚಳ ಅನ್ವಯವಾಗಲಿದ್ದು, ಪರಿಷ್ಕೃತ ವೇತನ ಶ್ರೇಣಿಯು ಮಾರ್ಚ್ 31, 2029 ರವರೆಗೆ ಜಾರಿಯಲ್ಲಿರುತ್ತದೆ.

ವೇತನ ಹೆಚ್ಚಳದ ಹಣ ಜುಲೈ 1, 2026 ರಿಂದ ನೌಕರರ ಮಾಸಿಕ ವೇತನದೊಂದಿಗೆ ಪಾವತಿಸಲಾಗುವುದು. ಏಪ್ರಿಲ್ 1, 2025ರಿಂದ ಜೂನ್ 30, 2026ರವರೆಗಿನ 15 ತಿಂಗಳ ಹಿಂಬಾಕಿಯನ್ನು ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು ಎಂದು ಹೇಳಲಾಗಿದೆ.

ಈ ವೇತನ ಹೆಚ್ಚಳದಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು 72.80 ಕೋಟಿ ರೂ., ವಾರ್ಷಿಕ 873.64 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಒಟ್ಟು 1.05 ಲಕ್ಷ ಸಿಬ್ಬಂದಿಗೆ ವೇತನ ಹೆಚ್ಚಳ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಆರ್‌ಸಿಬಿ- ಕೆಕೆಆರ್ ಪಂದ್ಯಸುಮಾರು ೩೦ಬಾರಿ ಮನವಿ ಮಾಡಿದರು ಕ್ಯಾರೇ ಎನ್ನುತ್ತಿಲ್ಲ ಮೇದಕ್ ಗ್ರಾಮ ಪಂಚಾಯತ್ ಅಧಿಕಾರಿ ರಾಮಪ್ಪಪತಿಯೊಂದಿಗೆ ವಾಸಿಸುತ್ತಿಲ್ಲ ಎಂಬ ನೆಪದಲ್ಲಿ ಪತ್ನಿ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಸಾರಿಗೆ ನೌಕರರ ಶೇ.12.50 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಟೆಸ್ಟ್ ಕ್ರಿಕೆಟ್: ಪಾಕ್ ವಿರುದ್ಧ ಬಾಂಗ್ಲಾಗೆ ಜಯಕನ್ನೆರಿ ಶ್ರೀಗಳ ಸಾನಿಧ್ಯದಲ್ಲಿ ಹಿಂದುಗಳು ನಾವೆಲ್ಲ ಒಂದು ಶಕ್ತಿ ಎಂಬ ಕಾರ್ಯಕ್ರಮಶ್ರೀಲಂಕಾದಿಂದ ಬರೋಬ್ಬರಿ 10 ಗಂಟೆ 45 ನಿಮಿಷ ಈಜಿ ದಡ ತಲುಪಿದ ದಂಪತಿ ಸರ್ ನನ್ನ ಹೆಂಡತಿಯ ಮದುವೆಯನ್ನು ತಪ್ಪಿಸಿ : ಬೆಳಗಾವಿಯಲ್ಲಿ ಪತಿಯ ಗೋಳಾಟ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರತಿ ಪ್ರಶ್ನೆ ಪತ್ರಿಕೆ ಲಕ್ಷಕ್ಕೆ ಮಾರಾಟ : ಮಾಸ್ಟರ್ ಮೈಂಡ್ ಅರೆಸ್ಟ್ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ: ತನಿಖೆ ಕೈಗೆತ್ತಿಕೊಂಡ CBI