Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ನಾಗಸಾಧು ದುರ್ಮರಣ 

Advertisement
ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಿರೀಕ್ಷೆಗೂ ಹೆಚ್ಚು ನಾಗಸಾಧು, ಸಂತರು, ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಕುಂಭಮೇಳದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿದ್ದು, 30 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.ಇದರಲ್ಲಿ ಬೆಳಗಾವಿಯ ನಾಲ್ವರು ಸೇರಿದ್ದಾರೆ. ಜೊತೆಗೆ ಈ ಅವಘಡದಲ್ಲಿ ನಾಗಸಾಧು ಕೂಡ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ನಾಗಸಾಧುವನ್ನು ರಾಜನಾಥ್ ಮಹಾರಾಜ್(49) ಎಂದು ಗುರುತಿಸಲಾಗಿದ್ದು, ಚಿತ್ರದುರ್ಗ ಮೂಲದವರಾಗಿದ್ದಾರೆ. ಇವರು ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್ ಶ್ರೀ ಒಡನಾಡಿಯಾಗಿದ್ದರು. ಕಳೆದ 15 ದಿನದ ಹಿಂದೆ ಅಷ್ಟೇ ಮಹಾಕುಂಭಮೇಳಕ್ಕೆ ಹೋಗಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ಚಿತ್ರದುರ್ಗದ ಲಂಬಾಣಿ ಸೇವಾಲಾಲ್ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್‌ ಸ್ವಾಮೀಜಿ ಮಾತನಾಡಿ, ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವ ರಾಜನಾಥ್ ಮಹಾರಾಜ್ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ತಲುಪಿಸಬೇಕೆಂದು ಉತ್ತರಪ್ರದೇಶ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಲ್ಲದೇ ಆದಷ್ಟು ಬೇಗ ಪಾರ್ಥೀವ ಶರೀರ ತರಿಸುವಂತೆ ಕರ್ನಾಟಕ ಸರ್ಕಾರಕ್ಕೂ ಸಹ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ ನಾಥ್ ಮಹಾರಾಜ್ ಸಿದ್ಧಿ ಸಾಧಕರಾಗಿದ್ದರು. ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿದ ರಾಜ್​ನಾಥ್ ಸಾವೆಂಬುದು ನಂಬಲು ಆಗುತ್ತಿಲ್ಲ. ನಾಗಸಾಧುಗಳ ಪಾರ್ಥೀವ ಶರೀರ ಅನಾಥವಾಗಿ ಬಿದ್ದಿರೋದು ಬೇಸರ ತಂದಿದೆ.

ನಮ್ಮನ್ನು ಕುಂಭಮೇಳಕ್ಕೆ ಆಹ್ವಾನಿಸಿದ್ರು. ಕುಂಭಮೇಳಕ್ಕೆ ಹೋಗಬೇಕು, ಸಾಧುಸಂತರ ದರ್ಶನ ಪಡೆಯಬೇಕು, ಪುಣ್ಯ ಸ್ನಾನ ಮಾಡಬೇಕು ಎನ್ನುತಿದ್ದರು. ನಾಗಸಾಧುಗಳ ಮಾತು ನೆನೆದರೆ ದುಃಖ ಆಗುತ್ತಿದೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ