Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮಲ್ಲಿದ್ದ ಮೂರು ಗುಂಪು ಈಗ ಒಂದಾಗಿವೆ : ಸತೀಶ್ ಜಾರಕಿಹೊಳಿ

Advertisement
ಬೆಳಗಾವಿ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳು ಕಾಂಗ್ರೆಸ್‌ನ ಭದ್ರಕೋಟೆಯಾಗಿವೆ. ಅವೆರಡನ್ನೂ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ರವಿವಾರ (ಮಾ.22) ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉಮೇಶ ಮೇಟಿ ಅವರಿಗೆ ಟಿಕೆಟ್‌ ದೊರಕಬೇಕು ಎಂಬುದು ಕ್ಷೇತ್ರದ ಜನರ ಹಾಗೂ ನಮ್ಮ ನಿರೀಕ್ಷೆಯಿತ್ತು.ಅದರಂತೆಯೇ ಹೈಕಮಾಂಡ್‌ ಅವರು ಉಮೇಶ ಮೇಟಿಗೆ ಟಿಕೆಟ್‌ ನೀಡಿದೆ ಎಂದರು.

ಬಾಗಲಕೋಟೆ ಕ್ಷೇತ್ರದಲ್ಲಿ ಮೇಟಿ ಕುಟುಂಬಸ್ಥರ ಮೇಲೆ ಅಲ್ಲಿನ ಜನ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಮೇಲಾಗಿ ಬಾಗಲಕೋಟೆಯಲ್ಲಿ ಕಳೆದ ಎರಡು ತಿಂಗಳಿಂದ ನಾವು ಸಹ ಚುನಾವಣೆ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ಉಮೇಶ ಮೇಟಿ ಗೆಲುವಿಗೆ ಕಷ್ಟವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಮೇಶ ಮೇಟಿ ಅವರ ಪರ ಪ್ರಚಾರ ಮಾಡುತ್ತೇನೆ. ದಾವಣಗೆರೆಗೂ ಪ್ರಚಾರಕ್ಕೆ ಹೋಗುತ್ತೇನೆ. ಆದರೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರಕ್ಕೆ ಆದ್ಯತೆ ನೀಡುತ್ತೇನೆ. ಎರಡು ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮಲ್ಲಿದ್ದ ಮೂರು ಗುಂಪು ಈಗ ಒಂದಾಗಿವೆ. ಅಹಿಂದ ಮತಗಳು ಕಾಂಗ್ರೆಸ್ ಪರವಾಗಿಯೇ ಇವೆ. ನಾವೇ ಗೆಲ್ಲುತ್ತೇವೆ. ಉತ್ತಮ ವಾತಾವರಣ ಇದೆ. ಇಡೀ ಪಕ್ಷ ಅವರ ಜತೆಗಿದೆ. ಇದಲ್ಲದೆ ನಮ್ಮ ಸರಕಾರದ ಗ್ಯಾರಂಟಿಗಳು ಕೈಹಿಡಿಯಲಿವೆ ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ ಆಗಬೇಕು ಎಂಬುದು ಎಚ್‌.ವೈ.ಮೇಟಿ ಅವರ ಆಸೆಯಾಗಿತ್ತು. ಅದು ಕೂಡ ಈಡೇರಿದೆ. ಬಿಜೆಪಿಯವರು ಹಿಂದುತ್ವದ ಆಧಾರದ ಮೇಲೆ ಪ್ರಚಾರ ಮಾಡುತ್ತಾರೆ. ನಾವು ಅಹಿಂದ ಮತಗಳನ್ನು ಇಟ್ಟುಕೊಂಡು ಪ್ರಚಾರ ಮಾಡುತ್ತೇವೆ ಎಂದು ಜಾರಕಿಹೊಳಿ ಹೇಳಿದರು.

ಮೇಟಿ ಕುಟುಂಬದಲ್ಲಿಯೇ ಟಿಕೆಟ್ ಗಾಗಿ ಪೈಪೋಟಿಯಿತ್ತು. ಬೇರೆಯವರು ಯಾರು ಆಕಾಂಕ್ಷಿಗಳು ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ