Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬ್ಯಾಟರಿ, ಡಿವಿಆರ್ ಗಳ ಕಳ್ಳತನ.

Advertisement
ಚಾಮರಾಜನಗರ:- ಸತ್ಯ ಮಂಗಲಂ ರಸ್ತೆಯ ಬಳಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮುಂಜಾನೆ 2 ರಿಂದ ಮೂರರ ಸಮಯದಲ್ಲಿ ಕಳ್ಳರು ಒಳಹೊಕ್ಕಿ ಕಾಲೇಜಿನಲ್ಲಿ ಅವಳವಡಿಸಿದ್ದ ಹತ್ತು ಬ್ಯಾಟರಿಗಳನ್ನು ಕಳಚಿಕೊಂಡು, ಅಲ್ಲೇ ಇದ್ದ ಸಿಸಿ ಕ್ಯಾಮರಾದ ಎರಡು ಡಿವಿಆರ್ ಗಳನ್ನು ಕಳಚಿಕೊಂಡು, ಹೋಗಿದ್ದಾರೆ. ಈ ಘಟನೆ ಬೆಳಗ್ಗೆ ಕಾಲೇಜಿಗೆ ಬಂದ ಅದ್ಯಾಪಕರು ಬಾಗಿಲು ತೆಗೆದಾಗ ಪ್ರಕರಣ ಬೆಳಕಿಗೆ ಬಂದಿದೆ.



ಇಂದು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ನಡೆಯುತ್ತಿದ್ದು, ಡಿವಿಆರ್ ಮತ್ತು ಬ್ಯಾಟರಿ ಇಲ್ಲದೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜು ಆಡಳಿತ ಮಂಡಲಿ ತರಾತುರಿಯಲ್ಲಿ ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ.

ಪ್ರವಾಸಿ ಮಂದಿರದ ಬಳಿ ಪಟ್ಟಣ ಪೊಲೀಸ್ ಠಾಣೆ ಇದ್ದ ವೇಳೆ ಯಾವುದೇ ರೀತಿಯ ಕಳ್ಳತನ ಪ್ರಕರಣಗಳು ನಡೆಯುತ್ತಿರಲಿಲ್ಲ. ಪಟ್ಟಣ ಠಾಣೆಯನ್ನು ಸಂತೇಮರಹಳ್ಳಿ ರಸ್ತೆಯಲ್ಲಿ ನಿರ್ಮಿಸಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡ ಬಳಿಕ ಕಳ್ಳರು ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ, ಕುವೆಂಪು ಬಡಾವಣೆ, ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆ, ಮುಬಾರಕ್ ಮೊಹ್ಲಲಾದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಪಟ್ಟಣ ಪೊಲೀಸರು ರಾತ್ರಿ ವೇಳೆ ಗಸ್ತು ಹಾಕುವ ಕೆಲಸ ಚುರುಕು ಮಾಡಿದಾಗ ಮಾತ್ರ ಕಳ್ಳತನ ಪ್ರಕರಣಗಳು ನಿಲ್ಲಲಿದೆ ಎಂದು ಅಕ್ಕ ಪಕ್ಕದ ನಿವಾಸಿಗಳು ಹೇಳುವರು.ಗುರುವಾರ ಬೆಳಗಿನ ಜಾವ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ನಡೆದಿರುವ ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ಲಕ್ಷರೂ ಮೌಲ್ಯದ ಬ್ಯಾಟರಿಗಳು, ಸಿಸಿ ಕ್ಯಾಮರಾದ ಡಿವಿಆರ್ ಗಳನ್ನು ಕಳ್ಳರು ಕದ್ದು ಹೋಗಿದ್ದಾರೆ. ಭಾರಿ ತೂಕದ ಬ್ಯಾಟರಿಗಳನ್ನು ಕದ್ದು ಹೋಗಿರುವುದು ಕಳ್ಳರ ಕೈ ಚಳಕ ತೋರ್ಪಡಿಸುತ್ತದೆ.ಈ ಬಗ್ಗೆ ಪಟ್ಟಣ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ