Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಭಯೋತ್ಪಾದಕರಿಗೂ ಯಾವುದೇ ವ್ಯತ್ಯಾಸವಿಲ್ಲ : ಅರವಿಂದ್ ಬೆಲ್ಲದ 

Advertisement
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೆಹಲ್ಗಾಂ‌ನ‌ ಭಯೋತ್ಪಾದಕ ದಾಳಿ ಸಂದರ್ಭ ಭಯೋತ್ಪಾದಕರು ಧರ್ಮದ ಹೆಸರು ಕೇಳಿ ಗುಂಡಿನ ದಾಳಿ ನಡೆಸಿಲ್ಲ ಎಂದಿರುವುದು ವಿವಾದಕ್ಕೆ ಈ ರೀತಿಯ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರಿಗೂ ಭಯೋತ್ಪಾದಕರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು‌ ಬೆಲ್ಲದ ಕಿಡಿಕಾರಿದ್ದಾರೆ.


'ದೇಶದ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದಾಗಲೂ ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಪರವಾಗಿ ಮಾತನಾಡುತ್ತಿದ್ದಾರೆ. ದೇಶದ ಭದ್ರತೆ ವಿಷಯ ಬಂದಾಗ ಧರ್ಮ, ಜಾತಿಯ ಯಾವ ಗುಂಗಿರಬಾರದು.


ಪಾಕಿಸ್ತಾನದ ವಿರುದ್ಧ ಯುದ್ಧ ನಡೆದರೆ ರಾಜ್ಯದ ಮುಸ್ಲಿಮರು ಏನೆಂದುಕೊಳ್ಳುತ್ತಾರೋ ಎಂದು ಅವರು ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕ್ಷುಲ್ಲಕ ಹೇಳಿಕೆ ನೀಡುವುದು ಸರಿಯಲ್ಲ' ಎಂದರು.


'ಇನ್ನು ದೇಶದ ಭದ್ರತೆ ದೃಷ್ಟಿಯಿಂದ ಪಾಕಿಸ್ತಾನವನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಮರ್ಥವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಕಾಶ್ಮೀರದಲ್ಲಿ ಯಾವ ಪರಿಸ್ಥಿತಿಯಿತ್ತು, ಬಿಜೆಪಿ ಆಡಳಿತವಿದ್ದಾಗ ಹೇಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ.


ಪಾಕಿಸ್ತಾನದ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದರೆ, ಅವರದ್ದೇ ಪಕ್ಷದ ಸಚಿವ ಸಂತೋಷ ಲಾಡ್ ಅದರ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದ' ಎಂದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ