ಹಾವೇರಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಆಸ್ತಿಗಾಗಿ ಕಲ್ಲಿನಿಂದ ಜಜ್ಜಿ ಅಣ್ಣನನ್ನೇ ತಮ್ಮನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಈ ಒಂದು ಕೊಲೆ ನಡೆದಿದೆ.
ಸಂತೋಷ್ ಮುರಗಪ್ಪ (30) ಎಂಬಾತನನ್ನು ತಮ್ಮ ಕುಮಾರ್ (27) ಎಂಬಾತ ಕೊಲೆ ಮಾಡಿದ್ದಾನೆ.ಒಂದು ಎಕರೆ ಜಮೀನಿಗಾಗಿ ಕೆಲವು ದಿನಗಳ ಹಿಂದೆ ಇಬ್ಬರ ಮಧ್ಯ ಗಲಾಟೆ ಆಗಿತ್ತು.
ಅಣ್ಣ ಊರಿಗೆ ಬಂದಿದ್ದಾಗ ತಮ್ಮ ಕುಮಾರ್ ಕೊಲೆ ಮಾಡಿದ್ದಾನೆ. ಆರೋಪಿ ಕುಮಾರನನ್ನು ಹಾನಗಲ್ ಠಾಣ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಾನಗಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


