ಬೆಂಗಳೂರು : ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್ಗಳನ್ನು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ.ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ.
ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಬಾಬಾ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿದ್ದ ಆರೋಪಿ ಆರಿಫ್, ನಮ್ಮ ಮನೆಗೆ ಬಂದು ಶಾಂತತೆಗಾಗಿ ಪೂಜೆ ಮಾಡಿಕೊಡಬೇಕು ಎಂದು ಕೋರಿ ಮುಂಗಡವಾಗಿ 10 ಸಾವಿರ ರೂಪಾಯಿಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದ. ಆದರೆ ಬಾಬಾ ತಾರಿಕ್ ಕಾರಣಾಂತರಗಳಿಂದ ಮೂರು ದಿನಗಳ ಕಾಲ ಭೇಟಿ ನೀಡಿರಲಿಲ್ಲ. ಜೂನ್ 29 ರಂದು ಆರೋಪಿ ಆರಿಫ್, ಬಾಬಾನನ್ನು ಕರೆತರಲು ತಾನೇ ಕಾರು ಕಳುಹಿಸಿಕೊಡುವುದಾಗಿ ಹೇಳಿದ್ದ. ಅದರಂತೆ ಕಾರ್ ಬಂದಾಗ ತಾರಿಕ್ ಹೋಗಲು ಸಿದ್ಧರಿರಲಿಲ್ಲ. ಈ ವೇಳೆ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.


