Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮರ್ಯಾದೆ ಗೇಡು ಹತ್ಯೆಗೆ ಇವ ನಮ್ಮವ ವಿಧೇಯಕ-2026 ಮಂಡನೆ

Advertisement
ಬೆಂಗಳೂರು: ರಾಜ್ಯದಲ್ಲಿ ಜಾತಿ ಕಾರಣಕ್ಕಾಗಿ ನಡೆಯುವ ಹತ್ಯೆಗಳು (ಮರ್ಯಾದೆ ಗೇಡು ಹತ್ಯೆ) ಮತ್ತು ಅಂತರ್ಜಾತಿ ವಿವಾಹವಾಗುವ ದಂಪತಿಗಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ನಿಟ್ಟಿನಲ್ಲಿ ರೂಪಿಸಲಾದ 'ಇವ ನಮ್ಮವ ಇವ ನಮ್ಮವ ವಿಧೇಯಕ-2026'ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.ಪ್ರಸಕ್ತ ಅಧಿವೇಶನದಲ್ಲೇ ಈ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.

ವಿಧೇಯಕದ ಪ್ರಮುಖ ಅಂಶಗಳು ಮತ್ತು ಶಿಕ್ಷೆಯ ವಿವರ:

ಜಾತಿ ದ್ವೇಷ ಮತ್ತು ಮರ್ಯಾದೆಗೇಡು ಹತ್ಯೆಗಳನ್ನು ಹತ್ತಿಕ್ಕಲು ಈ ಕಾಯ್ದೆಯಲ್ಲಿ ಕಠಿಣ ಕಾನೂನು ಕ್ರಮಗಳನ್ನು ಸೂಚಿಸಲಾಗಿದೆ.

ಮರ್ಯಾದೆಗೇಡು ಹತ್ಯೆಗೆ ಜೀವಾವಧಿ: ಜಾತಿ ಕಾರಣಕ್ಕೆ ಮದುವೆ ನಿರಾಕರಿಸಿ ಅಥವಾ ಮದುವೆಯಾದ ನಂತರ ಮರ್ಯಾದೆ ಹೋಯಿತೆಂದು ಕೊಲೆ ಮಾಡಿದರೆ ಅಂತಹವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ.

ಕೊಲೆ ಯತ್ನಕ್ಕೆ ಶಿಕ್ಷೆ: ವಿವಾಹವಾದ ಕಾರಣಕ್ಕೆ ದಂಪತಿಗಳ ಕೊಲೆಗೆ ಸಂಚು ರೂಪಿಸಿದರೆ ಅಥವಾ ದಾಳಿ ಮಾಡಿದರೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ದೈಹಿಕ ಹಲ್ಲೆಗೆ ಶಿಕ್ಷೆ: ಅಂತರ್ಜಾತಿ ವಿವಾಹವಾದವರ ಮೇಲೆ ಹಲ್ಲೆ ನಡೆಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.

ಸಣ್ಣಪುಟ್ಟ ಹಲ್ಲೆಗೂ ದಂಡನೆ: ಗಂಭೀರವಲ್ಲದ ಹಲ್ಲೆ ನಡೆಸಿದ ಸಂದರ್ಭದಲ್ಲಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ವಂಚನೆಗೆ 'ರೇಪ್' ಶಿಕ್ಷೆ: ವಿವಾಹದ ಆಮಿಷವೊಡ್ಡಿ, ನಂತರ ಜಾತಿಯ ಕಾರಣ ನೀಡಿ ವಂಚಿಸಿದರೆ ಅದನ್ನು 'ರೇಪ್' (ಅತ್ಯಾಚಾರ) ಎಂದು ಪರಿಗಣಿಸಿ ಕಠಿಣ ಶಿಕ್ಷೆ ನೀಡಲಾಗುವುದು.

ದಂಪತಿಗಳಿಗೆ ರಕ್ಷಣೆ: ಜೀವ ಬೆದರಿಕೆ ಇರುವ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪೊಲೀಸ್ ಇಲಾಖೆಯ ಮೂಲಕ ವಿಶೇಷ ರಕ್ಷಣೆ ಒದಗಿಸಲು ಈ ವಿಧೇಯಕದಲ್ಲಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಜಾತಿ ವೈಷಮ್ಯ ತಡೆದು ಸಾಮಾಜಿಕ ಸಮಾನತೆ ತರುವುದು ಸರ್ಕಾರದ ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್