Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚನೆ : ಮೂವರು ಅರೆಸ್ಟ್

Advertisement
ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೈತರಿಗೆ ಕತ್ತೆ ನೀಡಿ ಅವರಿಂದ ಹಾಲು ಖರೀದಿಸುವ ವ್ಯವಹಾರ ನಡೆಸುತ್ತಿದ್ದ ಜೆನ್ನಿ ಮಿಲ್ಕ್ ಕಂಪನಿಯಿಂದ 318ಕ್ಕೂ ಹೆಚ್ಚು ರೈತರು ಮೋಸ ಹೋಗಿದ್ದರು.

ಸುಮಾರು 10 ಕೋಟಿ ರೂ.ಗೂ ಅಧಿಕ ವಂಚನೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಎಂಡಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೇದಯಪಾಳ್ಯಂ ಗ್ರಾಮದ ನೂತಲಪಾಟಿ ಮುರಳಿ(43), ಕಂಪನಿಯ ವ್ಯವಸ್ಥಾಪಕ ಕಡಪ ಜಿಲ್ಲೆಯ ಗಾಳಿವೀಡು ಗ್ರಾಮದ ಕಾವಲಪಲ್ಲಿ ಉಮಾಶಂಕರ ರೆಡ್ಡಿ(33), ಮತ್ತು ಕಂಪನಿಯ ಸೂಪರ್ ವೈಸರ್ ಕಡಪ ಜಿಲ್ಲೆ ಪೋರ್ಮಾಮಿಲ್ಲ ಮಂಡಲಂನ ಸೈಯದ್ ಮಹಮ್ಮದ್ ಗೌಸ್(27) ಅವರನ್ನು ಬಂಧಿಸಲಾಗಿದೆ.

ಎಸ್ಪಿ ಬಿ.ಎಲ್. ಶ್ರೀಹರಿಬಾಬು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ ರಚಿಸಲಾಗಿದ್ದು, ಆಂಧ್ರದಲ್ಲಿ ಆರೋಪಿಗಳ ಜಾಡು ದೊರೆತ ಕೂಡಲೇ ಕಾರ್ಯ ಪ್ರವೃತ್ತರಾಗಿ ಸೋಮವಾರ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 19ರಂದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದುವರೆಗೆ 318 ಜನ ವಂಚನೆಗೊಳಗಾದ ರೈತರು ದೂರು ನೀಡಿದ್ದಾರೆ. ಕಂಪನಿಗೆ ಸೇರಿದ 5 ಖಾತೆಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ