Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚನೆ : ಮೂವರು ಅರೆಸ್ಟ್

Advertisement
ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೈತರಿಗೆ ಕತ್ತೆ ನೀಡಿ ಅವರಿಂದ ಹಾಲು ಖರೀದಿಸುವ ವ್ಯವಹಾರ ನಡೆಸುತ್ತಿದ್ದ ಜೆನ್ನಿ ಮಿಲ್ಕ್ ಕಂಪನಿಯಿಂದ 318ಕ್ಕೂ ಹೆಚ್ಚು ರೈತರು ಮೋಸ ಹೋಗಿದ್ದರು.

ಸುಮಾರು 10 ಕೋಟಿ ರೂ.ಗೂ ಅಧಿಕ ವಂಚನೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಎಂಡಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೇದಯಪಾಳ್ಯಂ ಗ್ರಾಮದ ನೂತಲಪಾಟಿ ಮುರಳಿ(43), ಕಂಪನಿಯ ವ್ಯವಸ್ಥಾಪಕ ಕಡಪ ಜಿಲ್ಲೆಯ ಗಾಳಿವೀಡು ಗ್ರಾಮದ ಕಾವಲಪಲ್ಲಿ ಉಮಾಶಂಕರ ರೆಡ್ಡಿ(33), ಮತ್ತು ಕಂಪನಿಯ ಸೂಪರ್ ವೈಸರ್ ಕಡಪ ಜಿಲ್ಲೆ ಪೋರ್ಮಾಮಿಲ್ಲ ಮಂಡಲಂನ ಸೈಯದ್ ಮಹಮ್ಮದ್ ಗೌಸ್(27) ಅವರನ್ನು ಬಂಧಿಸಲಾಗಿದೆ.

ಎಸ್ಪಿ ಬಿ.ಎಲ್. ಶ್ರೀಹರಿಬಾಬು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ ರಚಿಸಲಾಗಿದ್ದು, ಆಂಧ್ರದಲ್ಲಿ ಆರೋಪಿಗಳ ಜಾಡು ದೊರೆತ ಕೂಡಲೇ ಕಾರ್ಯ ಪ್ರವೃತ್ತರಾಗಿ ಸೋಮವಾರ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 19ರಂದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದುವರೆಗೆ 318 ಜನ ವಂಚನೆಗೊಳಗಾದ ರೈತರು ದೂರು ನೀಡಿದ್ದಾರೆ. ಕಂಪನಿಗೆ ಸೇರಿದ 5 ಖಾತೆಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ