Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಜಲು ತೆರಳಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ದುರ್ಮರಣ

Advertisement

ಧಾರವಾಡ : ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಮುಳುಗಿ ದುರ್ಮರಣ. ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ನಡೆದಿದೆ. 

ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ.ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೇಸಿಗೆಯ ಕಡು ಬಿಸಿಲಿನ ತಾಪ ತಾಳಲಾರದೆ ಮೂವರು ಅಪ್ರಾಪ್ತ ಬಾಲಕರು ಧಾರವಾಡ ತಾಲೂಕಿನ ಸಿಂಗನಹಳ್ಳಿ ಬಳಿಯ ಕೆರೆಯಲ್ಲಿ ಈಜಲು ಹೋಗಿದ್ದಾರೆ.

 ಆದರೆ ಈ ವೇಳೆ ಕೆರೆಯಲ್ಲಿ ಮುಳುಗಿ ಜಲಸಮಾಧಿಯಾಗಿದ್ದಾರೆ. ಮೃತರಲ್ಲಿ ಅಬ್ಬಾಸ್ ಮತ್ತು ಅಸ್ಲಂ ಸಹೋದರರು. ಸದ್ಯ ಮೂವರು ಬಾಲಕರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಹೊರತೆಗೆದಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಧಾರವಾಡ ಎಸ್​​ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲಿಸಿದರು. ಮೃತ ಬಾಲಕರ ದೇಹಗಳನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಸಿಂಗನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಿಷಬ್ ಪಂತ್ ಐಪಿಎಲ್‌ನ ಮೊದಲ ತಲೆದಂಡಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್ ಗೆ ರಾಜ್ಯಪಾಲರ ಆಹ್ವಾನಈಜಲು ತೆರಳಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ದುರ್ಮರಣಡಿ.ಕೆ. ಶಿವಕುಮಾರ್ ಅವರು ಸಿಎಲ್‌ಪಿ ನಾಯಕರಾಗಿ ಆಯ್ಕೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಸವದಿಯವರಿಗೆ  ಸಚಿವ ಸ್ಥಾನ ನೀಡಲು ಸಿ ಎಸ್ ನೇಮಗೌಡ ಆಗ್ರಹ ಸರ್ಕಾರಗಳ ಕೈಲಾಗದ ಪುಣ್ಯ ಕಾರ್ಯಗಳನ್ನು ಧರ್ಮಸ್ಥಳ ಯೋಜನೆ ಮಾಡುತ್ತಿದೆ : ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ ಲಕ್ಷ್ಮೀನಾರಾಯಣ್ ಶ್ಲಾಘನೆಅಶಕ್ತರಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆಯ ಜನಮಂಗಲ ಕಾರ್ಯಕ್ರಮ ವಸಂತ ಎಸ್ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಸಿದ್ದರಾಮಯ್ಯ ನೆನೆದು ಸತೀಶ್ ಜಾರಕಿಹೊಳಿ ಭಾವುಕ ಪೋಸ್ಟ್ ಕೆಎಂಎಫ್‌ ನಲ್ಲಿ ಖಾಲಿ ಇರುವ 55 ಹುದ್ದೆಗಳಿಗೆ ಅರ್ಜಿ ಆಹ್ವಾನ