Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆ ಬಿಟ್ಟು ಹೋದ ಮೂವರು ಮಕ್ಕಳು 

Advertisement

ಸೂರತ್ : ಮೊಬೈಲ್​(Mobile)ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. 

ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು.ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ.

ಅವರು ಮುಂಬೈ ರೈಲು ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪೊಲೀಸರ ಪ್ರಕಾರ ಕಾಣೆಯಾದ ಮಕ್ಕಳ ವಯಸ್ಸು 14, 11 ಮತ್ತು 9 ವರ್ಷ, ಅವರಲ್ಲಿ ಒಬ್ಬ ಬಾಲಕಿ ಕೂಡ ಇದ್ದಾಳೆ. ಮೇ 19ರ ಬೆಳಗಿನ ಜಾವ ಕುಟುಂಬದವರೆಲ್ಲಾ ಮಲಗಿರುವಾಗ ಅವರು ಮನೆಯಿಂದ ಓಡಿ ಹೋಗಿದ್ದಾರೆ.

ಮಕ್ಕಳು ತಮ್ಮ ತಂದೆಯ ಮೊಬೈಲ್ ಫೋನ್‌ನಲ್ಲಿ ಜನಪ್ರಿಯ ಆನ್‌ಲೈನ್ ಬ್ಯಾಟಲ್ ಗೇಮ್ ಗರೆನಾ ಫ್ರೀ ಫೈರ್ ಆಡುತ್ತಿದ್ದರು, ಅದರ ದಾಸರಾಗಿದ್ದರು ಎಂದರೂ ತಪ್ಪಾಗಲಾರದು.

ತಂದೆ ಕಳೆದ ತಿಂಗಳ ಕೊನೆಯಲ್ಲಿ ತನ್ನ ಹಳ್ಳಿಗೆ ಹೋಗುವಾಗ ಆಕಸ್ಮಿಕವಾಗಿ ತನ್ನ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರು ಇರಲಿಲ್ಲವೆಂದು, ಮಕ್ಕಳು ಮೊಬೈಲ್​ನಲ್ಲಿ ಆಟಗಳನ್ನು ಆಡುತ್ತಾ ಕಾಲ ಕಳೆದಿದ್ದರು ಎಂದು ಆರೋಪಿಸಲಾಗಿದೆ.

ತಂದೆ ಮನೆಗೆ ಹಿಂದಿರುಗಿದಾಗ ತಮ್ಮ ಮಕ್ಕಳು ಮೊಬೈಲ್ ಗೇಮ್ ಹುಚ್ಚು ಹಿಡಿಸಿಕೊಂಡಿದ್ದಾರೆ ಎಂದು ತಾಯಿ ದೂರು ಕೊಟ್ಟಿದ್ದರು.ಈ ಅಭ್ಯಾಸವನ್ನು ನಿಲ್ಲಿಸುವ ಪ್ರಯತ್ನದಲ್ಲಿ, ಘಟನೆಗೆ ಮೂರು ದಿನಗಳ ಮೊದಲು ತಂದೆ ಫೋನ್‌ನಿಂದ ಸಿಮ್ ಕಾರ್ಡ್ ತೆಗೆದು ಮೊಬೈಲ್ ಅನ್ನು ಲಾಕ್ ಮಾಡಿದ್ದರು ಎಂದು ವರದಿಯಾಗಿದೆ. ಈ ನಿರ್ಬಂಧದಿಂದ ಮಕ್ಕಳು ಕೋಪಗೊಂಡರು, ನಂತರ ಅವರು ಮನೆ ಬಿಡಲು ನಿರ್ಧರಿಸಿರಬಹುದು ಎಂದಿದ್ದಾರೆ.

ಸೂರತ್‌ನ ಜವಳಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕ ಕುಟುಂಬಕ್ಕೆ ಸೇರಿದ ಈ ಮಕ್ಕಳು ಮನೆಯಿಂದ ಹೊರಡುವ ಮೊದಲು 15 ಸಾವಿರ ರೂ. ತೆಗೆದುಕೊಂಡು ಹೋಗಿದ್ದರು. ಮಕ್ಕಳು ಕಾಣೆಯಾಗಿರುವುದನ್ನು ಕಂಡುಕೊಂಡ ನಂತರ, ಕುಟುಂಬವು ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿತು.

ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ಆಟಗಳನ್ನು ಆಡುವುದರಲ್ಲಿ ಮತ್ತು ಅಂತಹುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಕಳೆಯುತ್ತಿದ್ದರು.ಇದರಿಂದ ಅಸಮಾಧಾನಗೊಂಡ ತಂದೆ ಅವರನ್ನು ಗದರಿಸಿ ಸಲಹೆ ನೀಡಿದ್ದರು.

ಮಕ್ಕಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಲವು ವಸ್ತುಗಳು ಮತ್ತು ನಗದು ತೆಗೆದುಕೊಂಡು ಮನೆಯಿಂದ ಹೊರಟು ಹೋಗಿದ್ದಾರೆ.

ಇಲ್ಲಿಯವರೆಗೆ ಪರಿಶೀಲಿಸಲಾದ ಸಿಸಿಟಿವಿ ದೃಶ್ಯಾವಳಿಗಳು ಮಕ್ಕಳು ಸುರಕ್ಷಿತವಾಗಿರುವಂತೆ ಕಾಣುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ