Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವು

Advertisement
ಬೆಂಗಳೂರು : ಲೋಕಸಭಾ ಚುನಾವಣೆಗೆ ಇಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವನ್ನಪ್ಪಿದಂತ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ 55 ವರ್ಷದ ಶಾಲಾ ಶಿಕ್ಷಕಿ ಯಶೋಧಮ್ಮ ಎಂಬುವರನ್ನು ಎಆರ್ ಓ ಆಗಿ ನೇಮಕ ಮಾಡಲಾಗಿತ್ತು.

ಚುನಾವಣಾ ಕರ್ತವ್ಯ ನಿರತರಾಗಿದ್ದಂತ ಸಂದರ್ಭದಲ್ಲೇ ಲೋ ಬಿಪಿಯಾಗಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸೋ ಮಾರ್ಗ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ ತುಮಕೂರು ನಗರದ ಎಸ್ ಎಸ್ ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಂತ ರಮೇಶ್ ಎಂಬುವರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ರಮೇಶ್ ಅವರು ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು.

ಇಂದು ಬೆಳಿಗ್ಗೆ ಎಸ್ ಎಸ್ ಪುರಂ ಮತಗಟ್ಟೆಗೆ ತೆರಳಿ, ಪತ್ನಿಯೊಂದಿಗೆ ಮತಚಲಾಯಿಸಿ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಇನ್ನೂ ಮಂಡ್ಯದಲ್ಲಿ ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿದ್ದಾರೆ. ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚನ್ನೇಗೌಡನ ದೊಡ್ಡಿ ಗ್ರಾಮದ ಕುಂದೂರಯ್ಯ(85) ಮೃತ ವೃದ್ದರಾಗಿದ್ದಾರೆ. ಅನಾರೋಗ್ಯದಿಂದ ನರಳುತ್ತಿದ್ದ ಕುಂದೂರಯ್ಯ ಅವರು, ಇಂದು ಕುಟುಂಬಸ್ಥರ ಜೊತೆ ಬಂದು ಮತದಾನ ಮಾಡಿದ್ದರು. ಮತದಾನ ಮಾಡಿ ಹೋದ ಕೆಲ ಸಮಯದಲ್ಲೆ ವೃದ್ದ ಸಾವನ್ನಪ್ಪಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ