Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಡ, ಮಕ್ಕಳನ್ನು ಬಿಟ್ಟು ಪ್ರಿಯತಮನೊಂದಗೆ ಓಡಿ ಮಹಿಳೆ : 13 ವರ್ಷದ ದಾಂಪತ್ಯಕ್ಕೆ ತಿಲಾಂಜಲಿ

Advertisement
ನೆಲಮಂಗಲ: ಸೋಶಿಯಲ್‌ ಮೀಡಿಯಾದಿಂದ ಸಂಸಾರವೇ ಮುರಿದು ಹೋಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಇಲ್ಲೊರ್ವ ಮಹಿಳೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತನಾದ ಯುವಕನೊಂದಿಗೆ ಮದುವೆಯಾಗುವ ಸಲುವಾಗಿ ಗಂಡ ಹಾಗೂ ಮಕ್ಕಳನ್ನು ತೊರೆದು ಹೋಗಿರುವ ಪ್ರಕರಣವು ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ನೇತ್ರಾವತಿ 13 ವರ್ಷಗಳ ಹಿಂದೆ ರಮೇಶ್ ಎಂಬ ಡ್ರೈವರ್‌ರನ್ನು ವಿವಾಹವಾಗಿದ್ದಳು. ಮದುವೆಯಾದ ನಂತರ ಮಕ್ಕಳ ಸರಳ ಜೀವನವನ್ನು ನಡೆಸುತ್ತಿದ್ದರು.

ಆದರೆ ರಮೇಶ್ ಡ್ರೈವರ್‌ ಆದ ಕಾರಣದಿಂದಾಗಿ ಹೆಚ್ಚು ಸಮಯ ಮನೆಯ ಹೊರಗೇ ಕಳೆದಿದ್ದನು. ಈ ಮಧ್ಯೆ, ನೇತ್ರಾವತಿ ಹೊಸ ಮೊಬೈಲ್ ಖರೀದಿಸಿ ಇನ್‌ಸ್ಟಾಗ್ರಾಂನಲ್ಲಿ ಖಾತೆ ತೆರೆದು ರೀಲ್ಸ್‌ ಮಾಡಲು ಮುಂದಾಗಿದ್ದಳು.

ರೀಲ್ಸ್ ಮಾಡುತ್ತಿದ್ದ ನೇತ್ರಾವತಿ, ಜನರ ಗಮನ ಸೆಳೆಯತೊಡಗಿದಳು. ನಂತರ ಹಲವು ಜನರಿಂದ ಮೆಸೇಜ್‌ಗಳು ಬರಲಾರಂಭಿಸಿದವು. ಇದೇ ಸಂದರ್ಭದಲ್ಲಿ ಸಂತೋಷ್ ಎಂಬ ಯುವಕನೊಂದಿಗೆ ಪರಿಚಯವಾಗಿದ್ದು, ಪರಿಚಯದಿಂದ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು.

ಸಂತೋಷ್ ಜೊತೆ ಕೇವಲ ಒಂದು ವಾರದ ಪರಿಚಯದ ಬಳಿಕ ನೇತ್ರಾವತಿ ತನ್ನ ಗಂಡ ರಮೇಶ್ ಹಾಗೂ ಮಕ್ಕಳನ್ನು ಬಿಟ್ಟು ಹೋಗಿದ್ದಳು. ಮನೆಯವರಿಗೆ ಈ ಕುರಿತು ಯಾವುದೇ ಸುಳಿವು ಇರಲಿಲ್ಲ.

ಇನ್‌ಸ್ಟಾಗ್ರಾಂನಲ್ಲಿ ಆ ಯುವಕನ ಜೊತೆ ಪ್ರೀತಿ ಬೆಳೆದ ನಂತರ, ಅವರು ವಿವಾಹವಾದ ವಿಡಿಯೋವನ್ನೇ ಪೋಸ್ಟ್ ಮಾಡಿದ್ದಾಳೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ ನೋಡಿದ ಗಂಡ ಫುಲ್‌ ಶಾಕ್‌ ಆಗಿದ್ದಾನೆ. ಬಳಿಕ ರಮೇಶ್ ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಮದುವೆಯಾದ ಕೆಲ ದಿನಗಳ ನಂತರ ನೇತ್ರಾವತಿ, ತನ್ನ ಹಳೆಯ ಮನೆಗೆ ಬಟ್ಟೆ ಹಾಗೂ ಆಭರಣಗಳನ್ನು ತೆಗೆದುಕೊಳ್ಳಲು ಪೊಲೀಸ್‌ ಭದ್ರತೆಯಲ್ಲಿ ನೇತ್ರಾವತಿ ಬಂದಿದ್ದು, ಈ ಸಂದರ್ಭದಲ್ಲಿ ಗಂಡನ ಮನೆಯವರು ಆಕೆಯನ್ನು ತರಾಟೆಗೆ ತೆಗೆದುಕೊಂಡರು.

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ರಮೇಶ್ ನೀಡಿದ ದೂರಿನ ಆಧಾರದಲ್ಲಿ ತನಿಖೆ ನಡೆಯುತ್ತಿದೆ.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ