Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದುವರೆಗೂ ನನ್ನನ್ನು ದೆಹಲಿಗೆ ಕರೆದಿಲ್ಲ, ಹೀಗಾಗಿ ಹೋಗುವುದಿಲ್ಲ : ಸಿದ್ದರಾಮಯ್ಯ 

Advertisement

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ರಾಹುಲ್ ಗಾಂಧಿ (Rahul Gandhi) ಅವರು ಇದುವರೆಗೂ ನನ್ನನ್ನು ದೆಹಲಿಗೆ ಕರೆದಿಲ್ಲ, ಹೀಗಾಗಿ ಸದ್ಯಕ್ಕೆ ದೆಹಲಿ ಪ್ರವಾಸದ ಯಾವುದೇ ಯೋಜನೆಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ನನ್ನನ್ನು ದೆಹಲಿಗೆ ಕರೆದಿಲ್ಲ ಮತ್ತು ನಾನು ಕೂಡ ಅವರ ಭೇಟಿಗೆ ಅವಕಾಶ ಕೇಳಿಲ್ಲ. ಒಂದು ವೇಳೆ ಅವರು ಕರೆದರೆ ಖಂಡಿತವಾಗಿಯೂ ಹೋಗುತ್ತೇನೆ, ಎಂದು ಹೇಳಿದರು.

ಸಂಪುಟ ಪುನಾರಚನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್‌ನಿಂದ ಕರೆಯೇ ಬಂದಿಲ್ಲ ಎಂದ ಮೇಲೆ ಚರ್ಚೆಯ ಅಜೆಂಡಾ ಹೇಗೆ ಫಿಕ್ಸ್ ಆಗುತ್ತದೆ? ಭೇಟಿ ನಿರ್ಧಾರವಾದ ಮೇಲೆ ಅದು ಸಂಪುಟ ವಿಸ್ತರಣೆಯೋ ಅಥವಾ ಬೇರೆ ವಿಷಯವೋ ಎಂಬುದು ತಿಳಿಯಲಿದೆ, ಎಂದರು.

ಒಂದು ವೇಳೆ ಹೈಕಮಾಂಡ್‌ನಿಂದ ಕರೆ ಬರದಿದ್ದರೆ, ಅಗತ್ಯವಿದ್ದಲ್ಲಿ ನಾನೇ ರಾಹುಲ್ ಗಾಂಧಿ ಅವರ ಬಳಿ ಸಮಯ ಕೇಳುತ್ತೇನೆ. ಆದರೆ ಸದ್ಯಕ್ಕಂತೂ ಯಾವುದೇ ಪ್ರವಾಸ ನಿಗದಿಯಾಗಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು. 

ಹೈಕಮಾಂಡ್ ಈಗಾಗಲೇ ನಾಯಕತ್ವ ಬದಲಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ ಎಂಬ ಮಾಧ್ಯಮಗಳ ವರದಿಗಳ ನಡುವೆ ಮುಖ್ಯಮಂತ್ರಿಗಳ ಈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇದು ಕೇವಲ ವದಂತಿ ಎಂಬ ಸಂದೇಶವನ್ನು ರವಾನಿಸಲು ಸಿಎಂ ಈ ಮೂಲಕ ಪ್ರಯತ್ನಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ