Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮೋದಿಯಿಂದ ಉತ್ತರ ಕರ್ನಾಟಕದ 5 ರೈಲ್ವೆ ನಿಲ್ದಾಣಗಳ ಲೋಕಾರ್ಪಣೆ 

Advertisement
ಬೆಂಗಳೂರು: ಇಂದು ರಾಜ್ಯದ 5 ರೈಲ್ವೆ ನಿಲ್ದಾಣಗಳ ಲೋಕಾರ್ಪಣೆ ನಡೆಯಲಿದೆ. ಬಾಗಲಕೋಟೆ. ಧಾರಾವಾಡ, ಬೆಳಗಾವಿ ಜಿಲ್ಲೆ ಗೋಕಾಕ್, ಕೊಪ್ಪಳ ಜಿಲ್ಲೆ ಮುನಿರಾಬಾದ್, ಗದಗ ರೈಲ್ವೆ ನಿಲ್ದಾಣಗಳನ್ನು ವರ್ಚುಯಲ್ ಮೂಲಕ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಬಾಗಲಕೋಟೆ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಭಾಗವಹಿಸಲಿದ್ದಾರೆ.ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಈ ರೈಲು ನಿಲ್ದಾಣಗಳ ನವೀಕರಣ ಮಾಡಲಾಗಿದೆ.

ದೇಶದ ಒಟ್ಟು 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೇರಿಸುವ ಯೋಜನೆ ಇದಾಗಿದ್ದು, ಮೊದಲ ಹಂತವಾಗಿ ರಾಜ್ಯದ ಐದು ರೈಲು ನಿಲ್ದಾಣಗಳು ನವೀಕರಣಗೊಂಡಿವೆ.

ಈ ನಿಲ್ದಾಣಗಳಲ್ಲಿ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಬಿಂಬಿಸಲಿದೆ. ರೈಲು ನಿಲ್ದಾಣಗಳ ಕಟ್ಟಡ ವಿನ್ಯಾಸವು ಆಯಾ ಪ್ರದೇಶದ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತದೆ. ಸಂಸ್ಕೃತಿ ಮತ್ತು ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದಿದೆ. ಪ್ರತಿ ನಿಲ್ದಾಣವು ಸೋಲಾರ್ ವಿದ್ಯುತ್ ಘಟಕ ಹೊಂದಿದೆ.

ದೇಶಾದ್ಯಂತ ಇಂದು 103 ನವೀಕೃತ ರೈಲು ನಿಲ್ದಾಣಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ನಿಲ್ದಾಣಗಳನ್ನು ನಗರ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲಾಗಿದ್ದುಮ ವಿಶ್ರಾಂತಿ ಕೊಠಡಿಮ ವಿಶಾಲವಾದ ಸಂಚಾರ ಪ್ರದೇಶ ಇತರೆ ಸೌಲಭ್ಯ ಒದಗಿಸಲಾಗಿದೆ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳು, ಪಾರ್ಕಿಂಗ್ ಸೌಲಭ್ಯ, ಲಿಫ್ಟ್, ಪ್ರಯಾಣಿಕರು ಮತ್ತು ದಿವ್ಯಾಂಗ ಸ್ನೇಹಿ ಸೌಲಭ್ಯ ಕಲ್ಪಿಸಲಾಗಿದೆ. ಬಹು ಮಾದರಿ ಸಂಪರ್ಕದ ಏಕೀಕರಣದೊಂದಿಗೆ ಈ ನಿಲ್ದಾಣಗಳು ಈ ಪ್ರದೇಶದ ಸಾಮಾಜಿಕ ಆರ್ಥಿಕ ಚಟುವಟಿಕೆಗಳ ಕೇಂದ್ರವಾಗಲಿವೆ ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ