Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಒಂದೇ ದಿನ ಮೂವರು ಹೃದಯಘಾತದಿಂದ ಸಾವು 

Advertisement
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ರಾಜ್ಯದಲ್ಲಿ ಒಂದೇ ದಿನ ಮೂವರು ಹೃದಯಘಾತದಿಂದ ಸಾವನಪ್ಪಿದ್ದಾರೆ.

ಬೆಂಗಳೂರಲ್ಲಿ ಕ್ಯಾಬ್ ಚಾಲಕ, ಹಾಸನದಲ್ಲಿ ಬಾತ್ ರೂಂನಲ್ಲಿ ಕುಸಿದುಬಿದ್ದು ಯುವತಿ ಸಾವನ್ನಪ್ಪಿದ್ದರೆ, ಕೊಡಗಿನಲ್ಲಿ ಅರಣ್ಯ ಅಧಿಕಾರಿ ಒಬ್ಬರು ಸಾವನ್ನಪ್ಪಿದ್ದಾರೆ.

ನಿಂತಲ್ಲೇ ಕ್ಯಾಬ್ ಚಾಲಕ ಕುಸಿದುಬಿದ್ದು ಸಾವು!

ಮೊದಲನೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಾಡನೂರಿನ ಕೆ.ಆರ್ ಅಭಿಷೇಕ್ ಎನ್ನುವ ಯುವಕ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಇಂದು ಬಸವೇಶ್ವರನಗರದಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಅಭಿಷೇಕ್ ಸಾವನಪ್ಪಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಸಹ ಮಾರ್ಗ ಮಧ್ಯದಲ್ಲಿ ಅಭಿಷೇಕ್ ಉಸಿರು ಚೆಲ್ಲಿದ್ದಾನೆ.

ಬಾತ್ ರೂಂನಲ್ಲೆ ಕುಸಿದುಬಿದ್ದು ಯುವತಿ ಸಾವು!

ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.

ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.

ಅರಣ್ಯಾಧಿಕಾರಿ ಸಾವು!

ಇನ್ನು ಕೊಡಗಿನಲ್ಲಿ ಅರಣ್ಯಾಧಿಕಾರಿ ದಿನೇಶ್ ಎಂಬುವವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿ ದಿನೇಶ್ ಅವರು ಸೇವೆ ಸಲ್ಲಿಸುತ್ತಿದ್ದರು.

ಆದರೆ ಇಂದು ಹಠಾತ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೃದಯಾಘಾತದಿಂದ ಮೂವರು ಸಾವನ್ನಪ್ಪಿರುವುದು ಜನರನ್ನು ಆತಂಕಕ್ಕೆ ದೂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ