ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಆಸ್ತಿ ವಿವಾದದ ಕಾರಣಕ್ಕೆ ಆರು ಜನರನ್ನು ಮಾರಕಸ್ತ್ರಗಳಿಂದ ಕೊಚ್ಚಿ, ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ.ನಿರಾಳೆ ಮತ್ತು ಕೊಳಗಿ ಕುಟುಂಬಗಳ ನಡುವೆ ಜಮೀನು ವಿವಾದವಿತ್ತು.
ಇದೇ ಕಾರಣಕ್ಕೆ ಗಲಾಟೆಯಾಗಿ ಹತ್ಯೆ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ ನಿರಾಳೆ, ಶಬ್ಬೀರ್ ನದಾಫ್ ಹತ್ಯೆಯಾದವರು ಎಂದು ಹೇಳಲಾಗಿದೆ.
ನಿರಾಳೆ ಕುಟುಂಬದ ಆರು ಜನರನ್ನು ಗುಂಡಿಕ್ಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

