Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಕಟ್ಟಿ ಹಾಕಿ ಚಿತ್ರಹಿಂಸೆ : ಸಾರ್ವಜನಿಕ ತೀವ್ರ ಆಕ್ರೋಶ 

Advertisement

ಬೆಳಗಾವಿ: ದೆವ್ವ, ಭೂತೋಚ್ಛಾಟನೆ ಹಾಗೂ ದೈವದ ಕೋಪದ (Belagavi) ನೆಪದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ದೈಹಿಕ ಹಾಗೂ ಮಾನಸಿಕ ಹಿಂಸೆಗೆ ಒಳಪಡಿಸುವ ದಾರುಣ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಲೇ ಇವೆ. 

ಜನರ ಮುಗ್ಧತೆ, ಭಯ ಹಾಗೂ ಅಜ್ಞಾನವನ್ನೇ ಬಂಡವಾಳವಾಗಿಸಿಕೊಂಡು ಕೆಲವರು ನಡೆಸುತ್ತಿರುವ ಇಂತಹ ಕೃತ್ಯಗಳು ಸಮಾಜ ತಲೆತಗ್ಗಿಸುವಂತೆ ಮಾಡುತ್ತಿವೆ.

ಇದೀಗ ಬೆಳಗಾವಿ ಜಿಲ್ಲೆಯ ಮಕ್ಕಳಗೇರಿ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಇಂತಹುದೇ ಒಂದು ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್‌ಸ್ಟಾಗ್ರಾಮ್‌ನ ಖಾತೆಯೊಂದರಲ್ಲಿ ಹಂಚಿಕೊಳ್ಳಲಾಗಿರುವ ಈ ದೃಶ್ಯಗಳಲ್ಲಿ, ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ದೈವದ ಹೆಸರಿನಲ್ಲಿ ಕ್ರೂರವಾಗಿ ಮತ್ತು ಹಿಂಸಾತ್ಮಕವಾಗಿ ನಡೆಸಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.

ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಾಗೂ ಸಾರ್ವಜನಿಕರು ಆಘಾತ ವ್ಯಕ್ತಪಡಿಸಿದ್ದು, ಮಹಿಳೆಯ ಮೇಲಿನ ಈ ಅತಿರೇಕದ ವರ್ತನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಯಾವುದೇ ವ್ಯಕ್ತಿ ಮಾನಸಿಕ ಅಸ್ವಸ್ಥತೆ ಅಥವಾ ಕೌಟುಂಬಿಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವ ಬದಲು, ಹೀಗೆ ಮೂಢನಂಬಿಕೆಯ ಕೂಪಕ್ಕೆ ತಳ್ಳಿ ದೌರ್ಜನ್ಯ ಎಸಗುವುದು ನಾಗರಿಕ ಸಮಾಜಕ್ಕೆ ದೊಡ್ಡ ಕಂಟಕವಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ. 

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತಕ್ಷಣವೇ ಜಾಗೃತಗೊಂಡು ಈ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಮತ್ತು ಧರ್ಮ ಹಾಗೂ ದೈವದ ಹೆಸರಿನಲ್ಲಿ ನಡೆಯುವ ಇಂತಹ ಶೋಷಣೆಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಬೇಕು ಎಂಬ ಆಗ್ರಹ ಕೇಳಿಬಂದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ತುಮಕೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ : 1.53 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಉಚಿತ ಆಧಾರ್ ನವೀಕರಣದ ಗಡುವು ಒಂದು ವರ್ಷದವರೆಗೆ ವಿಸ್ತರಣೆಸಾರಿಗೆ ನೌಕರರೊಂದಿಗೆ ರಾಜ್ಯ ಸರ್ಕಾರದ ಮಾತುಕತೆ ವಿಫಲ : ನಾಳೆಯಿಂದ ಪ್ರತಿಭಟನೆ ಗ್ರಾಹಕರಿಗೆ ಮತ್ತೆ ಮರ್ಮಘಾತ : ಪೆಟ್ರೋಲ್ - ಡೀಸೆಲ್ ಬೆಲೆ 90 ಪೈಸೆ ಹೆಚ್ಚಳಪಾಕಿಸ್ತಾನ್‌ಗೆ ಗೆಲ್ಲಲು ೪೩೭ ರನ್‌ಗಳ ಗುರಿಮೇ 20ರಂದು ದೇಶವ್ಯಾಪಿ ಮೆಡಿಕಲ್ ಶಾಪ್ ಗಳು ಬಂದ್ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಕಟ್ಟಿ ಹಾಕಿ ಚಿತ್ರಹಿಂಸೆ : ಸಾರ್ವಜನಿಕ ತೀವ್ರ ಆಕ್ರೋಶ ಡ್ರೈವರ್ ಕಾಲೋನಿಯಲ್ಲಿನ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಮನವಿ32 ಲಕ್ಷದ ವಿಟೆಂಜ್ ಸೂಟ್ ನಲ್ಲಿ ಮಿಂಚಿದ ಇಶಾ ಅಂಬಾನಿ ದೇಶದ ಮೊದಲ ಬುಲೆಟ್ ರೈಲಿನ ಫೋಟೋ ಹಂಚಿಕೊಂಡ ಭಾರತೀಯ ರೈಲ್ವೆ ಇಲಾಖೆ