Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಾಪಾರ ನಡೆಸದೆ ಖಾಲಿ ಬಿದ್ದಿದ್ದ ಅಂಗಡಿ ತೆರವುಗೊಳಿಸಿದ ಪಟ್ಟಣ ಪಂಚಾಯ್ತಿ

Advertisement
ತುರುವೇಕೆರೆ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿಬದಿಯಲ್ಲಿದ್ದ ವ್ಯಾಪಾರ ಮಾಡದೆ ಹಾಗೇ ಬಿಟ್ಟಿದ್ದ ಅಂಗಡಿಗಳನ್ನು ಪಟ್ಟಣ ಪಂಚಾಯ್ತಿ ತೆರವುಗೊಳಿಸಿತು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಆರೋಗ್ಯ ನಿರೀಕ್ಷಕ ನರಸಿಂಹಮೂರ್ತಿ ನೇತೃತ್ವದಲ್ಲಿ ಪೌರಕಾರ್ಮಿಕರು ಪಟ್ಟಣದ ದಬ್ಭೇಘಟ್ಟ ರಸ್ತೆ, ಬಾಣಸಂದ್ರ ರಸ್ತೆ, ಮಾಯಸಂದ್ರ ರಸ್ತೆ, ತಿಪಟೂರು ರಸ್ತೆಗಳ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡದೆ ಬಹಳ ವರ್ಷಗಳಿಂದ ಮುಚ್ಚಿದ ಸ್ಥಿತಿಯಲ್ಲಿದ್ದು ನಾಗರೀಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ತಳ್ಳುವ ಗಾಡಿಗಳು, ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿದರು.

ಈ ಬಗ್ಗೆ ಮಾತನಾಡಿದ ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಪಟ್ಟಣದಲ್ಲಿ ದಿನೇದಿನೇ ಜನ ಸಂದಣಿ ಹಾಗೂ ವಾಹನಗಳು ಹೆಚ್ಚುತ್ತಿವೆ, ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ರಸ್ತೆಯಿಂದ ಸ್ವಲ್ಪ ದೂರ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸಿದರೆ ಪಾದಚಾರಿಗಳಿಗೆ, ವಾಹನ ಸವಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಪ್ರತಿಯೊಬ್ಬರೂ ರಸ್ತೆಯ ಹತ್ತಿರವೇ ಅಂಗಡಿ ಇಟ್ಟುಕೊಳ್ಳುತ್ತಿರುವುದು ಸಂಚಾರಿ ವ್ಯವಸ್ಥೆಗೆ ಸಮಸ್ಯೆಯಾಗಿದೆ. ಇದಲ್ಲದೆ ಬಹಳ ವರ್ಷಗಳಿಂದ ಪೆಟ್ಟಿಗೆ ಅಂಗಡಿ ಇಟ್ಟು ಅಂಗಡಿ ತೆರೆಯದೆ, ವ್ಯಾಪಾರ ನಡೆಸದೆ ಇರುವ ಹಲವು ಅಂಗಡಿಗಳು ಪ್ರಮುಖ ರಸ್ತೆಗಳಲ್ಲಿದ್ದುದು ಗಮನಕ್ಕೆ ಬಂದಿತ್ತು. ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ನಡೆಸಲಾಗಿದೆ ಎಂದರು.

ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕ ನರಸಿಂಹಮೂರ್ತಿ ಮಾತನಾಡಿ, ಪಟ್ಟಣದ ನಾಗರೀಕರ ಅನುಕೂಲಕ್ಕಾಗಿ ಪಟ್ಟಣ ಪಂಚಾಯ್ತಿ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ವ್ಯಾಪಾರ ನಡೆಸದೆ ಹಲವು ಮಂದಿ ರಸ್ತೆ ಬದಿ ಅಂಗಡಿ ಬಿಟ್ಟುಹೋಗಿದ್ದಾರೆ. ಇವುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವ್ಯಾಪಾರ ಮಾಡುವಂತವರು ಅಂಗಡಿ ತೆರೆಯಲಿ, ಅದನ್ನು ಬಿಟ್ಟು ಅಂಗಡಿ ಖಾಲಿ ಮಾಡಿ ಪೆಟ್ಟಿಗೆಯನ್ನು ಇಲ್ಲೇ ಬಿಟ್ಟು ಹೋಗುವುದರಿಂದ ಪಟ್ಟಣದ ಅಂದವೂ ಹಾಳಾಗುತ್ತದೆ. ಆ ಸ್ಥಳಗಳಲ್ಲಿ ಗಲೀಜು ಹೆಚ್ಚಾಗಿ ಅನೈರ್ಮಲ್ಯಕ್ಕೆ ಕಾರಣವಾಗುತ್ತದೆ ಎಂದರು.

ಪಟ್ಟಣದ ದಬ್ಭೇಘಟ್ಟ ರಸ್ತೆ, ಬಾಣಸಂದ್ರ ರಸ್ತೆ, ಮಾಯಸಂದ್ರ ರಸ್ತೆ, ತಿಪಟೂರು ರಸ್ತೆಗಳ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡದೆ ಬಹಳ ವರ್ಷಗಳಿಂದ ಮುಚ್ಚಿದ ಸ್ಥಿತಿಯಲ್ಲಿದ್ದು ನಾಗರೀಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ತಳ್ಳುವ ಗಾಡಿಗಳು, ಪೆಟ್ಟಿಗೆ ಅಂಗಡಿಗಳ ಬಗ್ಗೆ ಹರಾಜುದಾರರಿಂದ ಮಾಹಿತಿ ಪಡೆದಿದ್ದ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾದರು. ತೆರವು ಕಾರ್ಯಾಚರಣೆಯಲ್ಲಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ