
ರಸ್ತೆಯು ಸಂಪೂರ್ಣ ಹಾಳಾಗಿದ್ದು,ದ್ವಿಚಕ್ರ ವಾಹನಗಳ ಸಂಚಾರ ಪ್ರಯಾಸವಾಗಿದೆ. ನಿಯಂತ್ರಣ ಕಳೆದುಕೊಂಡು ಸವಾರರು ಕೆಳಗೆ ಬಿದ್ದಿರುವ ಉದಾಹರಣೆಯೂ ಬಹಳಷ್ಟಿವೆ. ಪ್ರತಿ ವರ್ಷ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕು.ಕಾಲುಗಳಿಗೆ ಕೆಸರು ಮೆತ್ತಿಕೊಂಡು, ಸಾಕಷ್ಟು ತೊಂದರೆ ಆಗಲಿದೆ.
ಶಾಲಾ ಮಕ್ಕಳು ಶಾಲೆಗೆ,ರೈತರು ತಮ್ಮ ಹೊಲಗಳಿಗೆ ಹೋಗಲು ಇದೊಂದೇ ರಸ್ತೆ ಇದೆ. ಹಾಗಾಗಿ ಅನಿವಾರ್ಯವಾಗಿ ಈ ರಸ್ತೆಯಲ್ಲಿ ಸಂಚರಿಸಬೇಕಿದೆ. ಈ ಭಾಗದ ಶಾಸಕರಿಗೆ ಹಾಗೂ ಗ್ರಾಮ ಪಂಚಾಯತ ಪಡಿಒ ಅವರ ಗಮನಕ್ಕೆ ಈ ಹಿಂದೆ ತರಲಾಗಿತ್ತು.ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಜಾರು ವ್ಯಕ್ತಪಡಿಸಿದ್ದಾರೆ.
ಈಗಲಾದರೂ ಪಂಚಾಯತಿ ಆಡಳಿತ,ಶಾಸಕರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗಮನ ಹರಿಸಬೇಕು ಎಂದು ಗೋರಕ್ ಜೋಶಿ ಹಾಗೂ ಸುಧಾಕರ ಗಡ್ಡದೋರ ಶುಕ್ರವಾರ ಮಾಧ್ಯಮ ಮೂಲಕ ಆಗ್ರಹಿಸಿದ್ದಾರೆ.
ವರದಿ :ಸಜೀಶ ಲಂಬುನೋರ

