Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಗೆ ಬಾಗಿದ ಗಿಡ-ಗಂಟಿ ಸಂಚಾರಕ್ಕೆ ತೊಂದರೆ

Advertisement
ಚಿಟಗುಪ್ಪ : ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದಿಂದ ಮನ್ನಾಎಖೇಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲಿ ಗಿಡ–ಗಂಟಿಗಳು ಬೆಳೆದು ಕೊಂಬೆಗಳು ರಸ್ತೆಗೆ ಬಾಗಿವೆ.ಇದರಿಂದ ವಾಹನಗಳ ಸವಾರರಿಗೆ ತೊಂದರೆಯಾಗುತ್ತಿದೆ.

ಸುಮಾರು ಮೂರು ಕಿಲೋ ಮೀಟರ್ ರಸ್ತೆ ಉದಕ್ಕೂ ಎರಡೂ ಬದಿಗೆ ಮುಳ್ಳು ಕಂಟಿಗಳು ಎತ್ತರಕ್ಕೆ ಬೆಳೆದಿವೆ.ಅಲ್ಲದೆ ರಸ್ತೆ ಮದ್ಯದಲ್ಲಿ ತಗ್ಗು ಗುಂಡಿಗಳು ಇರುವುದರಿಂದ ಪ್ರಯಾಣಿಕರು ಇನ್ನೂ ಹೆಚ್ಚಿನ ತೊಂದರೆ ಎದುರಿಸುತ್ತಿದ್ದಾರೆ.

‘ಗಿಡ–ಗಂಟಿ ಬೆಳೆದ ಕಾರಣ ತಿರುವು ರಸ್ತೆಯಲ್ಲಿ ಎದುರಿನಿಂದ ಬರುವ ವಾಹನಗಳು ಕಾಣುತ್ತಿಲ್ಲ. ಇದರಿಂದ ಅಪಘಾತಗಳು ಸಹಜ ಎಂಬಂತಾಗಿದೆ ಎಂಬುದು ಸವಾರ ವಿಠ್ಠಲ ರೆಡ್ಡಿ ಹೇಳುತ್ತಿದ್ದಾರೆ.

ರಸ್ತೆ ಬದಿ ಹುಲ್ಲು ಬೆಳೆದಿದ್ದರಿಂದ ರಸ್ತೆಗಳು ಕಿರು ರಸ್ತೆಗಳಂತಾಗಿವೆ.ನಿತ್ಯವೂ ಸಂಚರಿಸುವ ಚಾಲಕರಿಗೆ ಆ ಹಾದಿ ಗೊತ್ತಿರುತ್ತದೆ. ಅಪರೂಪಕ್ಕೆ ಬರುವ ಚಾಲಕರು ಗೊಂದಲಕ್ಕೀಡಾಗುತ್ತಾರೆ.ಒಮ್ಮೊಮ್ಮೆ ಎದುರಿನ ವಾಹನಗಳ ಬಗ್ಗೆ ತಿಳಿಯದೇ ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ.ರಸ್ತೆ ಬದಿ ಜಂಗಲ್‌ ಕಟಾವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ರಸ್ತೆಗಳು ಸಾರ್ವಜನಿಕ ಆಸ್ತಿಗಳು.ಅವುಗಳು ವ್ಯವಸ್ತಿತವಾಗಿ ಇರುವಂತೆ ನೋಡಿಕೊಳ್ಳಬೇಕಾದದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಕರ್ತವ್ಯ.ತಕ್ಷಣವೇ ರಸ್ತೆ ಪಕ್ಕದ ಹುಲ್ಲು,ಮುಳ್ಳು ಕಂಟಿಗಳು ತೆಗೆದು ಶುಚಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರ.

ವರದಿ : ಸಜೀಶ ಲಂಬುನೋರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ