LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಖಡಕೇಶ್ವರ ಪ್ರೌಢ ಶಾಲೆಯಲ್ಲಿ ಸಮವಸ್ತ್ರ ದಿನಾಚರಣೆ

Advertisement
ಅಧ್ಯಯನ ಸಾಧನೆಗೆ ಸಹಕಾರಿ

ಭಾಲ್ಕಿ : ನಿರಂತರ ಓದು, ಅಧ್ಯಯನ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗಲಿದೆ ಎಂದು ಶಿಕ್ಷಕ ಬಸವರಾಜ ಪ್ರಭಾ ಹೇಳಿದರು. ಪಟ್ಟಣದ ಲೆಕ್ಚರರ ಕಾಲೋನಿಯ ಖಡಕೇಶ್ವರ ಪ್ರೌಢ ಶಾಲೆಯಲ್ಲಿ ಸಮವಸ್ತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮವಸ್ತ್ರ ಎಲ್ಲರೂ ಸಮಾನರೆಂಬ ಭಾವ ಮೂಡಿಸುತ್ತದೆ. ವಿದ್ಯಾರ್ಥಿಗಳು ಸಮವಸ್ತç ಧರಿಸುವುದರಿಂದ ಮೇಲು-ಕೀಳು ಎನ್ನುವ ಭಾವ ಬರುವುದಿಲ್ಲ. ಸಮವಸ್ತç ಶಿಸ್ತಿನ ಸಂಕೇತವೂ ಹೌದು ಎಂದರು.

ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮೈಗೂಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ತಿಳಿಸಿದರು.



ಅಥರ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶೃತಿ ಬಿರಾದಾರ್ ಮಾತನಾಡಿ, ಸಮವಸ್ತ್ರ ಸಮಾನತೆಯ ಸಂಕೇತವಾಗಿದೆ. ಇದರಿಂದ ಕಿರಿಯ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಸಮಾನತೆಯ ಗುಣಗಳನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಮುಖ್ಯಗುರು ಆನಂದ ಕಲ್ಯಾಣೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಇಳಕಲ್ ಸಾರಿ ಸೆಂಟರ್‌ನ ಮಾಲೀಕ ವಿಜಯಕುಮಾರ ಸಜ್ಜನ್, ಶಿಕ್ಷಕರಾದ ಜಯಪ್ರಕಾಶ ಸಹಾನೆ, ಅಂಜಲಿ ಜೋಶಿ, ಶುಭಂ ರಾಯವಾಡ ಇದ್ದರು. ಪ್ರಕಾಶ ರುದನೂರೆ ಸ್ವಾಗತಿಸಿದರು. ಉದಯಕುಮಾರ ಜೋಶಿ ನಿರೂಪಿಸಿದರು. ದಿಲೀಪ ಘಂಟೆ ವಂದಿಸಿದರು.

ವರದಿ:ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ