Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿ ಕಲಿಯಲು ಮುಂದಾದ ಕೇಂದ್ರ ಸಚಿವ ಕುಮಾರಸ್ವಾಮಿ

Advertisement
ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ವಾರಾಂತ್ಯ ಬಿಟ್ಟು ಉಳಿದ ದಿನ ಹಿಂದಿ ಕಲಿಯಲು ಶುರು ಮಾಡಿದ್ದಾರೆ. ಪ್ರತಿದಿನ 90 ನಿಮಿಷಗಳ ಕಾಲ ಹಿಂದಿ ಕಲಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಸಚಿವರು ಇನ್ನು ಮುಂದೆ ಆನ್‌ಲೈನ್ ಮೂಲಕ ಹಿಂದಿಯನ್ನು ಕಲಿಯಲಿದ್ದಾರೆ.

ಹಿಂದಿ ಕಲಿಕೆಗಾಗಿಯೇ ಬೋಧಕರನ್ನು ನೇಮಿಸಿಕೊಂಡಿದ್ದು, ಹಿಂದಿ ಬರವಣಿಗೆ ಹಾಗೂ ಸುಲಭವಾಗಿ ಹಿಂದಿಯಲ್ಲಿ ಮಾತನಾಡುವುದನ್ನು ಅವರು ಹೇಳಿಕೊಡಲಿದ್ದಾರೆ. ಲೋಕ ಸಭೆಯಲ್ಲಿ ಹಿಂದಿಯಲ್ಲಿ ಮಾತನಾಡಲು ಹಾಗೂ ತಮ್ಮ ವಿಚಾರಗಳನ್ನು ಮಂಡಿಸಲು ಕಷ್ಟವಾಗುತ್ತಿರುವುದರಿಂದ ಕುಮಾರಸ್ವಾಮಿಯವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಹೆಚ್ಚಿನ ಸಂಸದರು ಹಿಂದಿಯಲ್ಲಿ ಮಾತನಾಡುತ್ತಾರೆ. ನನ್ನ ಸಚಿವಾಲಯದ ಎಲ್ಲ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡುತ್ತಾರೆ. ಹೀಗಾಗಿ ಹಿಂದಿ ಕಲಿಕೆ ನನಗೆ ಅನಿವಾರ್ಯವಾಗಿದೆ, ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

1996 ರಲ್ಲಿ ಪ್ರಧಾನಿಯಾಗಿದ್ದ ಎಚ್‌ಡಿ ದೇವೇಗೌಡ ಅವರಿಗೂ ಹಿಂದಿ ಭಾಷೆಯ ಸಮಸ್ಯೆ ಕಾಡಿತ್ತು. 30 ದಿನಗಳಲ್ಲಿ ಹಿಂದಿ ಕಲಿಯಿರಿ ಎಂಬ ಪುಸ್ತಕ ಹಿಡಿದು ಓಡಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಫೋಟೋ ತೆಗೆದಿದ್ದರು. ಆಗಿನ ಕಾಲದಲ್ಲಿಯೇ ಆ ಫೋಟೋ ಎಲ್ಲೆಡೆ ವೈರಲ್ ಆಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ