Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಜವಳಗೇರಾ ಗ್ರಾಮಕ್ಕೆ ಭೇಟಿ

Advertisement
-----------------ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ, ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆ

ರಾಯಚೂರು : ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆ ಸಮಾರಂಭ ಅ.16ರಂದು ನಡೆಯಿತು.
ಪೂರ್ವನಿಗದಿಯಂತೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬೆಳಗ್ಗೆ 11.35ರ ವೇಳೆಗೆ ಸಿಂಧನೂರ ಮಾರ್ಗವಾಗಿ ಜವಳಗೇರಾ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ದೇಶಿ ಶೈಲಿಯ ಮಹಿಳಾ ಡೊಳ್ಳಿನ ತಂಡದವರಿಂದ ಹಾಗೂ ಪುಷ್ಪಾರ್ಪಣೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಮೊದಲಿಗೆ ಸಚಿವರು, ಅಂದಾಜು 2.54 ಕೋಟಿ ರೂ ವೆಚ್ಚದಲ್ಲಿ, ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ದಿ ಯೋಜನೆಯಡಿ ನಬಾರ್ಡ ಸಂಯುಕ್ತವಾಗಿ ರೂಪಿಸಿರುವ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವಾದ ಕಲ್ಯಾಣ ಸಂಪದ ಕೇಂದ್ರವನ್ನು ರಿಬ್ಬನ್ ಕತ್ತರಿಸಿ ಲೋಕಾರ್ಪಣೆ ಮಾಡಿದರು.
ಇದೆ ವೇಳೆ ಸಚಿವರು, ಕಲ್ಯಾಣ ಸಂಪದ ಕಟ್ಟಡದಲ್ಲಿನ ಕಂಪನ ಜರಡಿ ಯಂತ್ರ, ಜಿಲ್ಲಾ ಮಿಶ್ರಣ ಸಂಗ್ರಹಗಾರ, ಜಿಲ್ಲಾ ಮಿಶ್ರಣ ಯಂತ್ರ, ಶುದ್ಧೀಕರಣ‌ ಮತ್ತು ಗ್ರೈಂಡಿಂಗ್ ಯಂತ್ರ, ಬಣ್ಣ ಆಧಾರಿತ ಬೇರ್ಪಡಿಸುವ ಯಂತ್ರ, ಬೇಳೆ ಪ್ಯಾಂಕಿಂಗ್ ಯಂತ್ರ, ತಯಾರಾದ ವಸ್ತುಗಳ ಸಂಗ್ರಹಗಾರದ ವೀಕ್ಷಣೆ ನಡೆಸಿದರು. ಬಳಿಕ ವೇದಿಕೆಯ ಕಾರ್ಯಕ್ರಮ ನಡೆಯಿತು.
ಈ ವೇಳೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ ನಾಗರಾಜ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ ನಬಾರ್ಡ ಅಧ್ಯಕ್ಷರಾದ ಶಾಜಿ ಕೆ.ವಿ., ಜಿಲ್ಲಾಧಿಕಾರಿ ನಿತೀಶ್ ಕೆ., ಜಿಪಂ ಸಿಇಓ ಈಶ್ವರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮುಖಂಡರಾದ ವೆಂಕಟರಾವ್ ನಾಡಗೌಡ, ಕೆ.ವಿರುಪಾಕ್ಷಪ್ಪ, ಜವಳಗೇರಾ ಗ್ರಾಪಂ ಅಧ್ಯಕ್ಷರಾದ ನಾಗಲಿಂಗ ಯಮನೂರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ: ಗಾರಲ ದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ