
ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜೂನ್ 25ರಿಂದ ಜುಲೈ 30ರ ವರೆಗೆ ರೈಲು ಪ್ರತಿ ದಿನ ಚಲಿಸಿದರೆ ಅಪಾರ ಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಆದ್ದರಿಂದ ಈ ಮನವಿಯನ್ನು ಪರಿಗಣಿಸಿ ಯಶವಂತಪುರ ಎಕ್ಸ್ಪ್ರೆಸ್ ರೈಲು ಸೇವೆಯನ್ನು ನಿತ್ಯ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ವಿನಂತಿಸಿದರು.
ತಕ್ಷಣ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಬಗ್ಗೆ ಕೂಡಲೆ ಪರಿಶೀಲಿಸಿ ನಿತ್ಯ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಒಂದೊಮ್ಮೆ ಅದೇ ರೈಲನ್ನು ನಿತ್ಯ ಓಡಿಸಲು ಸಾಧ್ಯವಾಗದಿದ್ದಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಚಿವರ ಈ ಭರವಸೆಯಿಂದಾಗಿ ಫಂಡರಾಪುರ ವಿಠ್ಠಲ ಭಕ್ತರಿಗೆ ಅನುಕೂಲವಾದಂತಾಗಿದೆ.
ನಿಟ್ಟೂರಿನ ರಮೇಶ್ ಎಸ್ ನಾರ್ವೇಕರ್ ಮತ್ತು ಖಾನಾಪುರದ ಶಾಂತಾರಾಮ ಗಂಗಾರಾಮ ಹೆಬ್ಬಾಳ್ಕರ್ ಅವರು, ಹುಬ್ಬಳ್ಳಿಯಿಂದ ಫಂಡರಾಪುರಕ್ಕೆ ರೈಲು ಸೇವೆಯ ಸಮಸ್ಯೆಯ ಕುರಿತು ವಾರಕರಿಯ ಸಂಪ್ರದಾಯದ ಜನರ ಪರವಾಗಿ ಕಾಗೇರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.
ವರದಿ :-ಪ್ರತೀಕ ಚಿಟಗಿ

