Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ಕಾನ್ ಸಹಿತ ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

Advertisement
ಹುಬ್ಬಳ್ಳಿ : ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಬೆಳಗಿನ ಜಾವದಿಂದಲೇ ವಿವಿಧ ದೇಗುಲಗಳಲ್ಲಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ.

ಹುಬ್ಬಳ್ಳಿ–ಧಾರವಾಡದ ಮಧ್ಯದಲ್ಲಿರುವ ರಾಯಾಪುರದ ಇಸ್ಕಾನ್ ಮಂದಿರದಲ್ಲಿ ಭಕ್ತಿಭಾವ ಮತ್ತು ಆಧ್ಯಾತ್ಮಿಕ ಉತ್ಸಾಹದಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಿಗ್ಗೆ ೮:೦೦ ಗಂಟೆಗೆ ಭಕ್ತರ ದರ್ಶನಕ್ಕಾಗಿ ದೇವಾಲಯವನ್ನು ತೆರೆಯಲಾಗಿದ್ದು, ೮:೩೦ ಗಂಟೆಗೆ ಪವಿತ್ರ ವೈಕುಂಠ ದ್ವಾರವನ್ನು ವಿಧಿವಿಧಾನಪೂರ್ವಕವಾಗಿ ತೆರೆಯಲಾಯಿತು. ಈ ಮೂಲಕ ಸಾವಿರಾರು ಭಕ್ತರು ದ್ವಾರವನ್ನು ದಾಟಿ ಶ್ರೀ ಶ್ರೀ ಗರುಡ ಸೇವಾ ಶ್ರೀ ಶ್ರೀ ಲಕ್ಷ್ಮೀ ನಾರಾಯಣರ ವಿಶೇಷ ಕೃಪೆಯನ್ನು ಪಡೆದರು.

ದೇವಾಲಯದ ವಾತಾವರಣ ಸಂಪೂರ್ಣವಾಗಿ ಆಧ್ಯಾತ್ಮಿಕ ಶಕ್ತಿಯಿಂದ ತುಂಬಿಕೊAಡಿತ್ತು. ಸಂಜೆ ೫:೦೦ ಗಂಟೆಗೆ ಶಾಂತಿ, ಸಮೃದ್ಧಿ ಮತ್ತು ಆತ್ಮೋನ್ನತಿಗಾಗಿ ಶ್ರೀ ವೆಂಕಟೇಶ್ವರ ಹೋಮವನ್ನು ವಿಧಿವಿಧಾನಪೂರ್ವಕವಾಗಿ ನೆರವೇರಿಸಲಾಯಿತು.
ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜನಸಾಗರವೇ ನೆರೆದಿದ್ದು ಬೆಂಗಳೂರಿನ ಪ್ರಸಿದ್ಧ ದೇಗುಲ ಇಸ್ಕಾನ್, ವೈಯಾಲಿಕಾವಲ್ ಟಿಟಿಡಿ ಹುಬ್ಬಳ್ಳಿಯ ರಾಯಾಪುರದ ಇಸ್ಕಾನ್ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದಿವೆ.

ಧಾರವಾಡದಲ್ಲಿ ವೈಕುಂಠ ಏಕಾದಶಿ: ಮಂಗಳವಾರ ವೈಕುಂಠ ಏಕಾದಶಿ ಪ್ರಯುಕ್ತ. ಶ್ರೀಹರಿ ಸೇವೆಯಲ್ಲಿ ವರ್ಷದ ಪರ್ಯಾಯ ಅರ್ಚಕರಾದಸತ್ಯನಾರಾಯಣ ವೆಂಕಟೇಶ್ ಅವರ ನೇತೃತ್ವದಲ್ಲಿ ಶ್ರೀ ಮಹಾಲಕ್ಷ್ಮಿ- ವೆಂಕಟೇಶ್ವರ ದೇವಸ್ಥಾನ ಮಣಕಿಲ್ಲಾ, ಧಾರವಾಡದಲ್ಲಿ ವಿಷ್ಣು ಸಹಸ್ರನಾಮ ಪಟಿಸಿ, ಒಂದು ಲಕ್ಷ ತುಳಸಿ ಅರ್ಚನೆಯನ್ನು ಮತ್ತು ಸದ್ಬಕ್ತರಿಗೆ ಉತ್ತರಾಭಿಮುಖದ ವೈಕುಂಠದ ದ್ವಾರವನ್ನು ನಿರ್ಮಿಸಿ, ಶ್ರೀದೇವರ ದರ್ಶನಕ್ಕೆ ಅನುಕೂಲ ಮಾಡಲಾಗಿತ್ತು.

ವರದಿ : ಸುಧೀರ್ ಕುಲಕರ್ಣಿ ‌
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ