
ಇನ್ನೂ ಈ ಸಮಸ್ಯೆ ಬಗೆಹರಿಸುವಂತೆ ಪದೇ ಪದೇ ಗ್ರಾ.ಪಂ ಪಿ.ಡಿ.ಓ ಹಾಗೂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಗಮನಕ್ಕೆ ತೆಗೆದುಕೊಂಡು ಬಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ್ದರಿಂದ ಇವರ ಮನವಿ ಮೇರೆಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಈ ಸ್ಥಳಕ್ಕೆ ಭೇಟಿಕೊಟ್ಟು ವರದಿ ತಯಾರಿಸಿ ಬೈಲಹೊಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಮಹೇಶ್ ಹೂಲಿ ಅವರ ಗಮನಕ್ಕೆ ತೆಗೆದುಕೊಂಡು ಬಂದು ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದರೂ ಈ ವಾಲ್ಮೀಕಿನಗರಕ್ಕೆ ರಸ್ತೆ ಮತ್ತು ಚರಂಡಿ ಬಾಗ್ಯ ಸಿಗುವುದೇ ಎಂಬುದನ್ನು ಕಾದುನೋಡಬೇಕಿದೆ.
ವರದಿ: ಬಸವರಾಜು

