Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರೆಮಲ್ಲೇನಹಳ್ಳಿ ಪಂಚಾಯ್ತಿಯಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ಅರಿವು ಸಭೆ

Advertisement
ತುರುವೇಕೆರೆ : ತಾಲೂಕಿನ ಅರೆಮಲ್ಲೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಭಾರತ ಗಣರಾಜ್ಯೋತ್ಸವದ ದಿನದಂದು ವಿಶೇಷವಾಗಿ ವಿಬಿ ಜಿ ರಾಮ್ ಜಿ ವಿಶೇಷ ಸಭೆಯನ್ನು ಏರ್ಪಡಿಸಿ ಗ್ರಾಮೀಣ ಜನರಿಗೆ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ಗ್ರಾಮ ಪಂಚಾಯ್ತಿ ಪಿಡಿಒ ಉಮೇಶ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿ ಮಾತನಾಡಿ, ಈ ಹಿಂದೆ ಇದ್ದ ಮನರೇಗಾ ಉದ್ಯೋಗ ಖಾತರಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಹೊಸದಾಗಿ ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ (ವಿಕಸಿತ ಭಾರತ, ರೋಜ್ ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಹೆಸರಿನಲ್ಲಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.

ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುವ ಮೂಲಕ ಆರ್ಥಿಕ ಭದ್ರತೆಯನ್ನು ಬಲಪಡಿಸುವುದು ಹಾಗೂ ಕೇವಲ ಗುಂಡಿ ತೆಗೆಯಲು, ಕಾರ್ಮಿಕರಿಗೆ ಕೂಲಿ ನೀಡುವುದಕ್ಕೆ ಸೀಮಿತವಾಗದೆ ಜಲಭದ್ರತೆ, ಗ್ರಾಮೀಣ ರಸ್ತೆ, ಜೀವನೋಪಾಯಕ್ಕೆ ಅಗತ್ಯವಾದ ಗೋದಾಮುಗಳಂತಹ ಶಾಶ್ವತ ಆಸ್ತಿಗಳ ಸೃಜನೆಗೂ ಈ ಯೋಜನೆ ಅವಕಾಶ ಕಲ್ಪಿಸಿದೆ. ರೈತರಿಗೆ ಭಿತ್ತನೆ ಹಾಗೂ ಸುಗ್ಗಿ ಕಾಲದಲ್ಲಿ ಕೆಲಸಗಾರರ ಕೊರತೆಯಾಗದಂತೆ ತಡೆಯಲು, ಕೃಷಿ ಅವಧಿಯಲ್ಲಿ ವರ್ಷಕ್ಕೆ ಒಟ್ಟು 60 ದಿನಗಳ ಕಾಲ ಯೋಜನೆಯ ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ. 60 ಹಾಗೂ ರಾಜ್ಯ ಸರ್ಕಾರ ಶೇ.40 ಅನುಪಾತದಲ್ಲಿ ವೆಚ್ಚ ಹಂಚಿಕೆ ಮಾಡುತ್ತದೆ ಎಂದರು.

ಯೋಜನೆಯಲ್ಲಿ ಪಾರದರ್ಶಕತೆ ಯರಲು ಕಾರ್ಮಿಕರ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆ, ಕೆಲಸದ ಸ್ಥಳ ನಿಗಾ ಇಡಲು ಜಿಪಿಎಸ್ ಮತ್ತು ಅಕ್ರಮಗಳನ್ನು ಪಚ್ಚೆಹಚುಲು ಕೃತಕ ಬಿದ್ದಿಮತ್ತೆ ತಂತ್ರಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದಾಗಿ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಅಕ್ರಮ ತಡೆಗಟ್ಟಲು ಸಹಾಯಕವಾಗಿದೆ. ಅರ್ಹ ಕಾರ್ಮಿಕರಿಗೆ ಉದ್ಯೋಗ ದೊರೆಯುವ ಜೊತೆಗೆ ಕೂಲಿ ಸಹ ಪಾವತಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಭಾರತಿ ತಿಮ್ಮೇಗೌಡ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮಾಜಿ ಅಧ್ಯಕ್ಷರೂ, ಹಾಲಿ ಸದಸ್ಯರಾದ ಕೆ.ಎಲ್.ರಾಜಶೇಖರ್, ಆರ್.ಶಿವಣ್ಣ, ಹೇಮಚಂದ್ರ, ಕಾರ್ಯದರ್ಶಿ ಜಯಣ್ಣ ಸೇರಿದಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ನಾಗರೀಕರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ