LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ : ಹೈಕೋರ್ಟ್

Advertisement
ಬೆಂಗಳೂರು: ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಮೂಲಕ ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ಹಕ್ಕು ಪ್ರತಿಪಾದಿಸಿಕೊಂಡು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಹೈಕೋರ್ಟ್ ಪೂರ್ಣ ವಿರಾಮ ಹಾಕಿದೆ.

ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ.

ಈ ತೀರ್ಪಿನಿಂದಾಗಿ ಜಂಗಮರು ಪರಿಶಿಷ್ಟ ಜಾತಿಯಲ್ಲಿ ತಮಗೂ ಪ್ರತ್ಯೇಕ ಒಳಮಿಸಲು ಬೇಕು ಎಂದು ಮುಂದಿಟ್ಟಿದ್ದ ಬೇಡಿಕೆಗೆ ಹಿನ್ನಡೆಯಾಗಲಿದೆ. ಲಿಂಗಾಯಿತರಲ್ಲಿನ ಜಂಗಮರು ಸಮಾಜದ ಉನ್ನತ ವರ್ಗಕ್ಕೆ ಸೇರಿದ್ದು ಅವರು ಪೂಜ್ಯ ವರ್ಗ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ವೀರಶೈವರಲ್ಲಿನ ಜಂಗಮ ವರ್ಗದ ವೃತ್ತಾಂತ, ಬೇಡ ಮತ್ತು ಬುಡ್ಗ ಜಂಗಮರ ಇತಿಹಾಸವನ್ನು ತೀರ್ಪಿನಲ್ಲಿ ಪ್ರಸ್ತಾಪಿಸಿರುವ ಹೈಕೋರ್ಟ್, ಇತಿಹಾಸ ತಜ್ಞ ಬಿ.ಎಲ್. ರೈಸ್ ಮತ್ತು ಮಾನವಶಾಸ್ತ್ರಜ್ಞರ ದಾಖಲೆಗಳನ್ನು ಉಲ್ಲೇಖಿಸಿ ಲಿಂಗಾಯಿತರಲ್ಲಿನ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ ಎಂದು ಸ್ಪಷ್ಟಪಡಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ