Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಇನ್ನಿಲ್ಲ 

Advertisement

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಗೆ ಮತ್ತೊಂದು ಆಘಾತ ಎದುರಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ಹಾಗೂ ಜನಪ್ರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿರುವ ಶೈಲಜಾ ಅವರು, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಉಪೇಂದ್ರ ಸಿನಿಮಾಗಳ ಮೂಲಕ ಜನಪ್ರಿಯತೆ:

ನಟಿ ಶೈಲಜಾ ಶ್ರೀಶೈಲನ್ ಅವರು ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು.

ವಿಶೇಷವಾಗಿ ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳಲ್ಲಿ ತಾಯಿ ಪಾತ್ರ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಮೂಲಕ ಅವರು ಇಡೀ ಕರ್ನಾಟಕಕ್ಕೆ ಪರಿಚಿತರಾಗಿದ್ದರು.

ಉಪೇಂದ್ರ ಅವರ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರಗಳಾದ ಎ ಮತ್ತು ಉಪ್ಪಿ 2 ಚಿತ್ರಗಳಲ್ಲದೆ, 'ಅನಂತನ ಅವಾಂತರ', ಬಾರೆ ನನ್ನ ಮುದ್ದಿನ ರಾಣಿ, ಪುಟ್ಟ ಹೆಂಡ್ತಿ ಹಾಗೂ ಗೃಹಪ್ರವೇಶ ಸೇರಿದಂತೆ ಹತ್ತಾರು ಯಶಸ್ವಿ ಚಿತ್ರಗಳಲ್ಲಿ ಇವರ ನೈಜ ಅಭಿನಯ ಪ್ರೇಕ್ಷಕರ ಮನ ಗೆದ್ದಿತ್ತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಮಠಕಲ್‌ನಲ್ಲಿ ಕುರಿ ಸಂತೆ ಆರಂಭಿಸಿ; ರಸ್ತೆ ಬದಿಯ ಅಕ್ರಮ ವ್ಯಾಪಾರಕ್ಕೆ ಕಡಿವಾಣ ಹಾಕಿಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಇನ್ನಿಲ್ಲ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ : ಐವರು ಶಂಕಿತ ಉಗ್ರರು ಅರೆಸ್ಟ್19ಕ್ಕೆ 'ಅಯೋಗ್ಯ -2 ಚಿತ್ರದ ಧ್ವನಿಸುರಳಿ ಬಿಡುಗಡೆ ಪುಣೆ ಮಾದರಿಯಲ್ಲಿಯೇ ಮತ್ತೊಂದು ಹತ್ಯೆ : ಮಗುವಿನ ಎದುರೇ ಗಂಡನ ಬರ್ಬರ ಹತ್ಯೆಗೈದ ಹೆಂಡತಿ, ಪ್ರಿಯಕರ ಚಾಮುಂಡಿ ದೇವಿಗೆ ಹರಕೆ ಸೀರೆ ತೀರಿಸಿದ್ದ ಡಿ.ಕೆ.ಶಿವಕುಮಾರ್ ಪತ್ನಿ ವಿದ್ಯುತ್,ಡಿಸೇಲ್ ಇಲ್ಲದ ದೇಶದ ಹೈಡ್ರೋಜನ್ ರೈಲಿಗೆ ಮೋದಿ ಚಾಲನೆ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ಸಿಗುವಂತಾಗಬೇಕು :ಅಶೋಕ  ಮಲಬನ್ನವರ15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ : ಎರಡನೇ ಬಾರಿಗೆ ಗರ್ಭಿಣಿಯಾದ ಬಾಲಕಿಪ್ರೀತಿಸಿ ಮದುವೆಯಾಗಿದ್ದ ಕೆಲವೇ ಕ್ಷಣಗಳಲ್ಲಿ ನವವಿವಾಹಿತನ್ನ ಬರ್ಬರ ಹತ್ಯೆ