Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ ಭಾರತಿ ಶಾಲೆಯಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲ : ವಿಜಯಭಾಸ್ಕರ

Advertisement
ಸೇಡಂ: ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಶೈಕ್ಷಣಿಕವಾಗಿ ತನ್ನನ್ನು ತಾನು ಅರ್ಪಿಸಿಕೊಂಡಿದೆ. ಸೇಡಂ ತಾಲೂಕಿನ ಗ್ರಾಮೀಣ ಭಾಗದ ಮಕ್ಕಳಿಗೆ ಹೆಚ್ವು ಅನುಕೂಲವಾಗುವ ನಿಟ್ಟಿನಲ್ಲಿ ಬಾಲ ಭಾರತಿ ವಿದ್ಯಾ ಮಂದಿರ ಪ್ರಾಥಮಿಕ ಶಾಲಾ ಶಿಕ್ಷಣ ನೀಡಿದೆ ಎಂದು ಪತ್ರಕರ್ತ ವಿಜಯಭಾಸ್ಕರರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಆರೇಬೊಮ್ಮನಹಳ್ಳಿ ಸಭಾಂಗಣದಲ್ಲಿ ನಡೆದ ಶ್ರೀ ಬಾಲ ಭಾರತಿ ವಿದ್ಯಾಮಂದಿರ ಪ್ರಾಥಮಿಕ ಶಾಲಾ 52 ನೇ ವಾರ್ಷಿಕೋತ್ಸವದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಅವರು, ದೈವಿ ನೆಲೆಯಾದ ಶ್ರೀ ಕೊತ್ತಲ ಬಸವೇಶ್ವರ ಅಂಗಳದಲ್ಲಿ 52 ವರ್ಷಗಳ ಹಿಂದೆ ಪೂಜ್ಯ ಮಡಿವಾಳೇಶ್ವರ ಸ್ವಾಮಿಗಳು ಆರಂಭಿಸಿದ ಶಿಕ್ಷಣ ಸಂಸ್ಥೆ ಸಂಸ್ಥಾಪನಾ ಶಾಲೆ ಬಾಲಭಾರತಿ ವಿದ್ಯಾಮಂದಿರ ಅನೇಕ ವಿದ್ಯಾರ್ಥಿಗಳ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವಲ್ಲಿ ಅಭೂತಪೂರ್ವ ಪಾತ್ರ ವಹಿಸಿದೆ ಎಂದರು.

ಮಕ್ಕಳಲ್ಲಿ ವಚನಗಳ ಪಠಣ ಮಾಡಿಸುವ ಮೂಲಕ ಬಾಲ ಭಾರತಿ ಶಾಲೆಯ ಅಂಗಳದಲ್ಲಿ ನಿತ್ಯವೂ ಒಂದಿಲ್ಲೊಂದು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಿಂತನಾ ಕೂಟ ಹಮ್ಮಿಕೊಳ್ಳಲಾಗುತ್ತದೆ. ಶಾಲಾ ವಾತಾವರಣದಿಂದ ಅನೇಕ‌ ಸಾಧಕರು ಹೊರಹೊಮ್ಮಿದ್ದಾರೆ. ಜೊತೆಗೆ ಸಂಸ್ಥೆಯ ನಿರಂತರ ಕಾಳಜಿಯಿಂದ ಹೆಚ್ಚಿನ ಮಕ್ಕಳು ಉನ್ನತ ಮಟ್ಟಕ್ಕೆ ಏರಿದ್ದಾರೆ ಎಂದರು.

ಶೈಕ್ಷಣಿಕ ಚಿಂತನಾ ಕೂಡ ಉಪನ್ಯಾಸ ನೀಡಿದ ಶಿಕ್ಷಕ, ಸಂಪನ್ಮೂಲ ವ್ಯಕ್ತಿ ಅಂಬಾರಾಯ ಧನಗರ ಮಾತನಾಡಿ, ಮಕ್ಕಳಲ್ಲಿ ಶಿಸ್ತು ಹಾಗೂ ಸಮಯ ಪಾಲನೆ ಮುಖ್ಯವಾದ ಅಂಶವಾಗಿದೆ. ಪ್ರಾತಃಕಾಲದಲ್ಲಿ ಎದ್ದು ಅಭ್ಯಾಸ ಮಾಡುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚಾಗಿರುತ್ತದೆ. ಧಾರವಾಹಿಗಳಿಂಸ ಹೊರಬಂದು ಮಕ್ಕಳ ಕಡೆ ಇಂದಿನ ಪೋಷಕರು ಗಮನ ನೀಡಬೇಕೆಂದು ಮಾರ್ಮಿಕವಾಗಿ ಹೇಳಿದರು.

ಇಂದಿನ ಮಕ್ಕಳು ಮೊಬೈಲ್ ಹಾಗೂ ಟಿವಿ ಗೀಳಿಗೆ ಬೀಳದೆ, ಪುಸ್ತಕಗಳ ಸ್ನೇಹ ಮಾಡಬೇಕಿದೆ. ಒಂದೊಳ್ಳೆ ಪುಸ್ತಕ ನಮ್ಮ‌ಜೀವನ ರೂಪಿಸಲು ಹೆಚ್ಚು ಸಹಾಯಕಾರಿಯಾಗುತ್ತದೆ. ಶಾಲೆಗೆ ಬರುವ ಮಕ್ಕಳು ಶಿಸ್ತು ಹಾಗೂ ಸಮಯ ಬಗ್ಗೆ ಎಚ್ಚರಿಕೆಯಿಂದ‌ ಇರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಹ ಕಾರ್ಯದರ್ಶಿ ಡಾ.ಸದಾನಂದ ಬೂದಿ ಮಾತನಾಡಿ, ಸಂಸ್ಥೆಯು ಮಡಿವಾಳ ಶ್ರೀಗಳ ಅಮೃತ ಹಸ್ತದಿಂದ ಆರಂಭವಾಗಿ 52 ವರ್ಷಗಳ ಸುಧೀರ್ಘ ಕಾಲ‌ ಮುನ್ನಡೆದುಕೊಂಡು ಬಂದಿದೆ. ಶಾಲೆಗೆ ಅನೇಕ ಸಾಧಕರು ಆಗಮಿಸಿ ಮಕ್ಕಳ ಮನೋವಿಕಾಸ ವೃದ್ಧಿಯಾಗುವಲ್ಲಿ ಪಾತ್ರವಹಿಸಿದ್ದಾರೆ ಎಂದರು.

ಶಾಲೆಯ ಮುಖ್ಯ ಗುರುಗಳಾದ ಲಿಂಗಪ್ಪ ಬಿರಾದಾರ ಪ್ರಾಸ್ತಾವಿಕ ಮಾತಗಳಾಡಿ ಶಾಲೆ ನಡೆದು ಬಂದ ದಾರಿಯ ಬಗ್ಗೆ ವಿವರಣೆ ನೀಡಿದರು. ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಮಕ್ಕಳ ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು. ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ