
ಸಮಾರಂಭದ ದಿವ್ಯ ಸಾನಿಧ್ಯವನ್ನು ಡಾ.ಚನ್ನಬಸವ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳವರು ನಂದವಾಡಗಿ. ಶ್ರೀ ಮ,ನಿ,ಪ್ರ, ಚನ್ನ ವೀರೇಶ್ವರ ಮಹಾಸ್ವಾಮೀಜಿಗಳವರು ವಿರಕ್ತ ಮಠ ಕೊಣ್ಣೂರು ವಹಿಸಿದ್ದರು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ ನಗರ ಕಲಾವಿದರ ತವರೂರು ಅದರಂತೆ ಸಾಹಿತಿಗಳ ಕವಿಗಳ ತವರೂರಾಗಿದೆ.ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಕ್ಕಳಲ್ಲಿ
ಕನ್ನಡ ಸಾಹಿತ್ಯವನ್ನು ಪಸರಿಸುವ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಅಲ್ಲದೆ ಹೆಚ್ಎಸ್ ಗೌಡರ ಅವರ ಎರಡು ಕೃತಿಗಳ ಲೋಕಾರ್ಪಣೆ ಗೊಳಿಸಿದ್ದು, ಇವರ ಬರವಣಿಗೆ ಹೀಗೆ ಸಾಗಲಿ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಾಹಿತಿಗಳು, ಸಾಧಕರು , ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾಧಕರಿಗೆ ಸತ್ಕಾರ ಸಮಾರಂಭ ವಿವಿಧ ಪ್ರಶಸ್ತಿಗಳ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ವರದಿ : ದಾವಲ್ ಶೇಡಂ

