Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಮೀನು ಸಿಕ್ಕ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ವಿನಯ್ ಕುಲಕರ್ಣಿ ರಿಲೀಸ್ 

Advertisement

ಬೆಂಗಳೂರು : ಧಾರವಾಡದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಭೀಕರ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಜಾಮೀನಿನ ಮೇಲೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಹೊರಬಂದಿದ್ದಾರೆ.

ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ಉಚ್ಚ ನ್ಯಾಯಾಲಯವು ತಾತ್ಕಾಲಿಕ ತಡೆ ನೀಡಿದ್ದು, ಕಠಿಣ ಶರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ವಿಶೇಷ ನ್ಯಾಯಾಲಯವು ಕಳೆದ ಏಪ್ರಿಲ್ ತಿಂಗಳಿನಲ್ಲಿ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳನ್ನು ದೋಷಿ ಎಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಮಾಜಿ ಸಚಿವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಶಿಕ್ಷೆಯ ಜಾರಿಗೆ ತಡೆ ನೀಡಿ ಬಿಡುಗಡೆಗೆ ಆದೇಶಿಸಿದೆ.

ಕೋರ್ಟ್ ಆದೇಶದ ಪ್ರತಿ ಜೈಲು ತಲುಪಿ, ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ವಿನಯ್ ಕುಲಕರ್ಣಿ ನಿನ್ನೆ ರಾತ್ರಿ ಕಾರಾಗೃಹದಿಂದ ಹೊರಬಂದರು.

ಜೈಲಿನ ಮುಖ್ಯ ದ್ವಾರದ ಬಳಿ ಜಮಾಯಿಸಿದ್ದ ನೂರಾರು ಬೆಂಬಲಿಗರು ಅವರಿಗೆ ಹೂಮಾಲೆ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. ಕಾರಿನಿಂದಲೇ ಬೆಂಬಲಿಗರತ್ತ ಕೈಬೀಸಿ ಶುಭಾಶಯ ಸ್ವೀಕರಿಸಿದ ಅವರು, ಮಾಧ್ಯಮಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ನೇರವಾಗಿ ಸ್ಥಳದಿಂದ ನಿರ್ಗಮಿಸಿದರು.

ಪ್ರಕರಣದ ಹಿನ್ನೆಲೆ ನೋಡುವುದಾದರೆ, 2016ರ ಜೂನ್ 15ರಂದು ಧಾರವಾಡದ ಜಿಮ್‌ ಒಂದರಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ನಂತರ ಪ್ರಕರಣದ ತನಿಖೆ ವಹಿಸಿಕೊಂಡಿದ್ದ ಸಿಬಿಐ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಮೀನು ಸಿಕ್ಕ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ವಿನಯ್ ಕುಲಕರ್ಣಿ ರಿಲೀಸ್ ಗ್ರಾಹಕರಿಗೆ ಸಿಹಿಸುದ್ದಿ : 19 ಕೆಜಿ ತೂಕದ ಸಿಲಿಂಡರ್ ಬೆಲೆ ₹209 ಇಳಿಕೆ ಇಂದು ಮೈಸೂರಿಗೆ ಪ್ರಧಾನಿ ಮೋದಿ : ಹಲವು ಕಾರ್ಯಕ್ರಮಗಳಲ್ಲಿ ಭಾಗಿ ಹಾಲಿ ಮತದಾರರ ಪಟ್ಟಿಯಿಂದ 1 ಕೋಟಿ ಮತದಾರರು ಡಿಲೀಟ್ ನಿವೃತ್ತ ಮುಖ್ಯಗುರು ದತ್ತಪ್ಪ ಅಲ್ಕೂರು ದಂಪತಿಗೆ ಹಳೆ ವಿದ್ಯಾರ್ಥಿನಿಯರಿಂದ ಬೆಳ್ಳಿ ವಿಘ್ನೇಶ್ವರ ಸಮರ್ಪಣೆ35 ವರ್ಷ ಸೇವೆ ಸಲ್ಲಿಸಿದ ದತ್ತಪ್ಪ ಅಲ್ಕೂರು ಅವರಿಗೆ ದದ್ದಲ್ ಶಾಲೆಯಲ್ಲಿ ಅದ್ಧೂರಿ ಬೀಳ್ಕೊಡುಗೆಎಸ್ ಸಿಪಿ, ಟಿ ಎಸ್ ಪಿ ಅನುದಾನ ದುರ್ಬಳಕೆ  ಆರೋಪ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ319 ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ :  ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭ ಮೊಬೈಲ್ ತರಬೇಡ ಎಂದಿದಕ್ಕೆ ಮುಖ್ಯ ಶಿಕ್ಷಕಿಯ ಕಾರಿನ ಮೇಲೆಯೇ ಕಲ್ಲು ಎತ್ತಹಾಕಲು ಮುಂದಾದ ವಿದ್ಯಾರ್ಥಿಕರ್ನಾಟಕ ಬಂದ್‌ ನಿರ್ಧಾರವನ್ನು ಕೈಬಿಡಬೇಕು : ಡಿ. ಕೆ ಶಿವಕುಮಾರ್