Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿರಾಟ್ ಕೊಹ್ಲಿಗೆ ಭಡ್ತಿ: ಶುಭಮಾನ್ ಗಿಲ್ ಅಗ್ರಸ್ಥಾನ ಅಭಾದಿತ

Advertisement
ದುಬೈ: ಚಾಂಪಿಯನ್ಸ್ ಟ್ರೋಫಿಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿ ಫೈನಲ್ ಪಂದ್ಯದ ಬಳಿಕ ಐಸಿಸಿ ಏಕದಿನ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಣೆ ಮಾಡಿದ್ದು, ಕಳಪೆ ಫಾರ್ಮ್ ನಿಂದ ಕುಸಿದಿದ್ದ ಭಾರತದ ವಿರಾಟ್ ಕೊಹ್ಲಿ ಪುಟಿದೆದ್ದಿದ್ದಾರೆ.

ಹೌದು.. ನಿರೀಕ್ಷೆಯಂತೆಯೇ ಅಂತಾರಾಷ್ಚ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಏಕದಿನ ಕ್ರಿಕೆಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಿಸಿದ್ದು, ಹಲವು ಆಟಗಾರರ ರ್ಯಾಂಕಿಂಗ್ ಸ್ಥಾನ ಬದಲಾಗಿದೆ. ಪ್ರಮುಖವಾಗಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯಗಳಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಪುಟಿದೆದ್ದಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾತ್ರ ಕುಸಿತ ಅನುಭವಿಸಿದ್ದಾರೆ.

ಬ್ಯಾಟರ್ ಗಳ ಪಟ್ಟಿಯಲ್ಲಿ ಭಾರತದ ಶುಭ್ ಮನ್ ಗಿಲ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 790ಅಂಕಗಳೊಂದಿಗೆ ಗಿಲ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಆಜಂ ಇದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸನ್ (760 ಅಂಕ) 3ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯಗಳಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಮ್ಮ ಅಂಕಗಳನ್ನು 747ಕ್ಕೆ ಏರಿಕೆ ಮಾಡಿಕೊಂಡು 4ನೇ ಸ್ಥಾನಕ್ಕೇರಿದ್ದಾರೆ.

ರೋಹಿತ್ ಸ್ಥಾನ ಕುಸಿತ: ಆದರೆ ಈ ಹಿಂದೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಶತಕದ ಮೂಲಕ ಫಾರ್ಮ್ ಗೆ ಮರಳಿದ್ದ ರೋಹಿತ್ ಶರ್ಮಾ ಬಳಿಕ ಮತ್ತೆ ಅಂತಹ ಮಹತ್ತರ ಇನ್ನಿಂಗ್ಸ್ ಆಡಿಲ್ಲ. ಹೀಗಾಗಿ ಅವರು ರ್ಯಾಂಕಿಂಗ್ ಪಟ್ಟಿಯಲ್ಲಿ 2 ಸ್ಥಾನ ಕುಸಿತ ಕಂಡಿದ್ದು, 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಂತೆಯೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿರುವ ಭಾರತ ಶ್ರೇಯಸ್ ಅಯ್ಯರ್ ಒಂದು ಸ್ಥಾನ ಮೇಲೇರಿ 8ನೇ ಸ್ಥಾನಕ್ಕೇರಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ