Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಸಿಐ ನಿಯಮದ ಬಗ್ಗೆ ವಿರಾಟ್ ಕೊಹ್ಲಿ ಬೇಸರ

Advertisement
ಪಿಎಲ್‌ 2025ರ ಆವೃತ್ತಿಗೆ ಇನ್ನು ಕೆಲವೇ ದಿನಗಳಿದ್ದು ಎಲ್ಲಾ ತಂಡಗಳು ಅಭ್ಯಾಸ ಆರಂಭಿಸಿವೆ. ವಿರಾಟ್ ಕೊಹ್ಲಿ ಕೂಡ ಬೆಂಗಳೂರಿಗೆ ಬಂದಿದ್ದು ಆರ್ ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಕೊಹ್ಲಿ ಅಭ್ಯಾಸ ಆರಂಭಿಸುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇನ್ನೋವೇಶನ್ ಲ್ಯಾಬ್ ಇಂಡಿಯನ್ ಸ್ಪೋರ್ಟ್ಸ್‌ ಸಮಿಟ್‌ನಲ್ಲಿ ಭಾಗವಹಿಸಿದ್ದು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಐಪಿಎಲ್‌ ಪಂದ್ಯಗಳ ಸಂದರ್ಭದಲ್ಲಿ ಆಟಗಾರರು ಕುಟುಂಬಸ್ಥರ ಜೊತೆ ಇರಬಾರದು ಎನ್ನುವ ಬಿಸಿಸಿಐ ನಿಯಮದ ಬಗ್ಗೆ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಆಟಗಾರರ ಕಠಿಣ ಸಮಯದಲ್ಲಿ ಕುಟುಂಬಸ್ಥರು ಜೊತೆಗೆ ಇದ್ದರೆ ಸಮತೋಲನ ಸಾಧಿಸಲು ಸಹಾಯವಾಗುತ್ತದೆ ಎಂದು ಹೇಳಿರುವುದಾಗಿ ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಲ್ಲಿ ಸೋತ ನಂತರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರವಾಸಗಳಲ್ಲಿ ಆಟಗಾರರರು ಕುಟುಂಬದವರ ಜೊತೆ ಇರುವುದ್ಕೆ ಕಠಿಣ ನಿಯಮಗಳನ್ನು ರೂಪಿಸಿದೆ. 45 ದಿನಗಳಿಗಿಂತ ಹೆಚ್ಚಿನ ದಿನ ಪ್ರವಾಸ ಕೈಗೊಂಡಾಗ ಮೊದಲ ಎರಡು ವಾರಗಳ ಬಳಿಕ ಮಾತ್ರ ಆಟಗಾರರ ಕುಟುಂಬದವರು, ಹೆಂಡತಿ ಮತ್ತು ಮಕ್ಕಳು 14 ದಿನಗಳವರೆಗೆ ಮಾತ್ರ ಜೊತೆಯಲ್ಲಿ ಇರಬಹುದು ಎಂದು ಎಂದು ತಿಳಿಸಿದೆ.

ಕಡಿಮೆ ಅವಧಿಯ ಪ್ರವಾಸದಲ್ಲಿ ಆಟಗಾರರು ಒಂದು ವಾರದವರೆಗೆ ಅವರ ಕುಟುಂಬಗಳೊಂದಿಗೆ ಇರಬಹುದಾಗಿದೆ.  ಹೊರಗೆ ನಡೆಯುವ ಯಾವುದೇ ತೀವ್ರವಾದ ಘಟನೆಗಳ ಸಮಯದಲ್ಲಿ ನಿಮ್ಮ ಕುಟುಂಬದವರು ಜೊತೆಗಿಲ್ಲದೇ ಇದ್ದರೆ ಎಷ್ಟು ಹಿಂಸೆಯಾಗುತ್ತದೆ ಎಂದು ವಿವರಿಸುವುದು ತುಂಬಾ ಕಷ್ಟ ಎಂದು ಹೇಳಿದರು. ಕುಟುಂಬದವರು ಯಾವ ರೀತಿಯ ವಿಶ್ವಾಸ ತರುತ್ತಾರೆ ಎನ್ನುವುದು ಅವರಿಗೆ ತಿಳಿದಿದೆ ಎನಿಸಲ್ಲ.

ಆ ನಿಯಮದ ಬಗ್ಗೆ ನನಗೆ ನಿರಾಸೆಯಾಗಿದೆ, ಪ್ರವಾಸದ ಸಮಯದಲ್ಲಿ ಕಳಪೆ ಪ್ರದರ್ಶನದ ಬಳಿಕ ಯಾವುದೇ ಆಟಗಾರ ಒಂಟಿಯಾಗಿ ಕೂತು ದುಃಖಪಡಲು ಬಯಸಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ