LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಗರದಲ್ಲಿ ಜೂ. 11 ರಿಂದ ವಿಜನ್ ಕರ್ನಾಟಕ ಬೃಹತ್ ಮೇಳ

Advertisement


ಬೆಳಗಾವಿ: ವಿಜನ್ ಕರ್ನಾಟಕ 2025 ಬೃಹತ್ ಮೇಳ ನಗರದ ಕೆ.ಎಲ್ ಇ ಸಂಸ್ಥೆಯ ಡಾ. ಬಿ.ಎಸ್. ಜಿರಗೆ ಸಭಾಂಗಣದಲ್ಲಿ ಜೂನ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ  ಈ ವಿಷಯ ತಿಳಿಸಿದ ಅವರು, ಐವತ್ತಕ್ಕೂ ಹೆಚ್ಚು ಸಚಿವರು, ಸರಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಬೃಹತ್ ಮೇಳದಲ್ಲಿ ಭಾಗವಹಿಸಲಿದ್ದು, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ ಹಾಗೂ ಭವಿಷ್ಯ ನಿರ್ಮಾಣ, ಆಧಾರ ಕಾರ್ಡ ಕ್ಯಾಂಪ್, ಔಷಧಿ ಹಾಗೂ ರಸಗೊಬ್ಬರ, ವಾಣಿಜ್ಯ ಹಾಗೂ ಹಣಕಾಸು ಸಂಸ್ಥೆಗಳು ಬೃಹತ್ ಮೇಳದಲ್ಲಿ  ಪಾಲ್ಗೊಳ್ಳಲಿವೆ ಎಂದು ಅವರು ಹೇಳಿದರು.

ಮೇಳದ ಭಾಗವಾಗಿ ರಕ್ಷಣೆ, ವಿಜ್ಞಾನ ಹಾಗೂ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ವಿದ್ಯುತ್ ಹಾಗೂ ಮಾಹಿತಿ ತಂತ್ರಜ್ಞಾನ, ರೇಲ್ವೇ, ಬ್ಯಾಂಕಿಂಗ್ ಕ್ಷೇತ್ರ, ವಸತಿ, ಪೆಟ್ರೋಲಿಯಂ, ಜಲ ಸಂಪನ್ಮೂಲ  ಮೇಳದ  ವಿಶೇಷ ಆಕರ್ಷಣೆಗಳಾಗಲಿವೆ ಎಂದು ಅವರು ತಿಳಿಸಿದರು. 2047 ರ ವಿಕಾಸ ಭಾರತ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದು, ಇದರ ಪ್ರಯತ್ನದ ಒಂದು ಭಾಗವೂ ಕೂಡ ಈ ಬೃಹತ್ ಮೇಳದ್ದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮನೀಷ್ ಗುಪ್ತಾ, ಮೀಟು ಪಾಲ್, ದಿನೇಶ ಗುಪ್ತಾ, ಶಾಸಕರಾದ ಅಭಯ್ ಪಾಟೀಲ್, ಮಾಜಿ ಶಾಸಕರಾದ ಅನಿಲ್ ಬೆನಕೆ, ಸಂಜಯ ಪಾಟೀಲ,ವಿಶ್ವನಾಥ ಪಾಟೀಲ್ ಇತರರು ಇದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ