Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂ ವಿವಾದ : ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ವಾರೆಂಟ್ ಜಾರಿ

Advertisement
ಮೈಸೂರು: ಭೂ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ.

ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ನೀಡಿತ್ತು.

ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ್ದಾರೆ.

ಮೈಸೂರು ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್​ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಬಳಿಕ ಭೂ ಮಾಲೀಕರು ತಮ್ಮ ಪರವಾಗಿ ಕೋರ್ಟ್​ನಲ್ಲಿ ಬಂದ ಆದೇಶವನ್ನು ಜಾರಿಗೊಳಿಸುವ ಮೂಲಕ ಜಮೀನನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಆದರೆ, ಈವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ವಹಿಸಿರಲಿಲ್ಲ. ಪರಿಣಾಮ ಭೂ ಮಾಲೀಕರು, ಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಆದೇಶವನ್ನು ಪಾಲನೆ ಮಾಡದ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿ, ವಿಚಾರಣೆಯನ್ನು ಏ.24 ಮುಂದೂಡಿದ್ದಾರೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ, ಕೋರ್ಟ್ ವಾರಂಟ್ ಪ್ರತಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ಪ್ರತಿ ಸಿಕ್ಕ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್