ಕಲಾದಗಿ: ಸುತ್ತಲಿನ ಹತ್ತಾರು ಹಳ್ಳಿಗಳ ರೈತರ ಜೀವನಾಡಿಯಾಗಿರುವ ಐತಿಹಾಸಿಕ ಕಳಸಕೊಪ್ಪ ಕೆರೆಯನ್ನು ತುಂಬಿಸುವ ಕನಸು ನನಸಾಗಿದೆ ಇದರಿಂದ ಈ ಭಾಗದ ರೈತರ ಸಂಭ್ರಮ ಇಮ್ಮಡಿಯಾಗಿದೆ.
ಅಗಸ್ಟ್ 7ರಂದು ಬೀಳಗಿ ಶಾಸಕ ಜೆ ಟಿ ಪಾಟೀಲ ಚಾಲನೆ ನೀಡಿದರು ಕಳಸಕೊಪ್ಪ ಸೇರಿದಂತೆ ಬಾದಾಮಿ ತಾಲ್ಲೂಕಿನ ಎಂಟು ಕೆರೆಗಳನ್ನು ತುಂಬುವ ಕಾರ್ಯಕ್ಕೆ ಮರು ಚಾಲನೆ ನೀಡಿದ್ದರು ಅದರ ಪರಿಣಾಮ ಐತಿಹಾಸಿಕ ಕಳಸಕೊಪ್ಪ ಕೆರೆ ತುಂಬಿ ಹರಿಯಲು ಆರಂಭಿಸಿದೆ ಕೆರೆ ಕೋಡಿ ಬಿದ್ದು ಹರಿದು ಬರುತ್ತಿರುವ ನೀರು ಹಳ್ಳಕ್ಕೆ ಬರುತ್ತಿದೆ ಕೆರೆ ತುಂಬಿರುವುದರಿಂದ ಅಂತರ್ಜಲಮಟ್ಟ ಹೆಚ್ಚಳಗೊಂಡು ರೈತರ ಪಂಪ್ಸೆಟ್ಗಳಿಗೆ ನೀರು ಬರಲಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸುತ್ತಾರ
ಕಳಸಕೊಪ್ಪ ಕೆರೆಗೆ ನೀರು ತುಂಬಿಸುವ ದಶಕಗಳ ಕನಸಿನ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ಈ ಯೋಜನೆಯು ಅಂದಾಜು 4.5 ಕೋಟಿ ರೂ. ವೆಚ್ಚದಲ್ಲಿ ರೂಪುಗೊಂಡಿದ್ದು ಸ್ಥಳೀಯ ಕೃಷಿ ಮತ್ತು ಕುಡಿಯ ನೀರಿನ ಅವಶ್ಯಕತೆಗಳನ್ನು ಪೂರೈಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ.
ಕಳೆದ 20 ವರ್ಷಗಳಲ್ಲಿ ಒಮ್ಮೆ ಮಾತ್ರ ಭಾರಿ ಮಳೆಗೆ ಕೆರೆ ತುಂಬಿ ಹರಿದಿದೆ. ಈಗ ಕಾಲುವೆ ಮೂಲಕ ಘಟಪ್ರಭಾ ನೀರು ತುಂಬಿಸಿ ಕೆರೆ ತುಂಬಿಸಲಾಗಿದೆ ಇಲ್ಲಿಯವರೆಗೆ ಮಳೆ ಬಂದರೆ ಮಾತ್ರ ಕೆರೆಗೆ ನೀರು ಎಂಬ ಪರಿಸ್ಥಿತಿ ಇತ್ತು ಈಗ ಕಾಲುವೆಯಲ್ಲಿ ನೀರು ಹರಿದರೆ ಕೆರೆಗೆ ನೀರು ತುಂಬುತ್ತದೆ ಎಂದು ಸ್ಥಳೀಯ ರೈತರು ಹರ್ಷ ವ್ಯಕ್ತಪಡಿಸುತ್ತಾರೆ.
ಕೆರೆಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು ರೈತರ ನೀರಾವರಿ ಮತ್ತು ಸ್ಥಳೀಯ ಜನರ ನೀರಿನ ಸಮಸ್ಯೆ ನಿವಾರಣೆ. ಈ ಭಾಗದಲ್ಲಿ ಮೂರು ಸಾವಿರ ಎಕರೆ ಬರಡು ಭೂಮಿಯನ್ನು ನೀರಾವರಿ ಮಾಡುವ ಉದ್ದೇಶದಿಂದಲೇ ಕೆರೆಗೆ ನೀರು ತುಂಬಿಸಲಾಗಿದೆ.
ಜಿಲ್ಲಾ ಕಾಂಗ್ರೆಸ ಘಟಕದ ಎಂ ಬಿ ಸೌದಾಗರ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಸಲಿಂ ಶೇಖ್, ವೆಂಕಣ್ಣ ಬಿರಾದಾರ ಪಾಟೀಲ, ಡಿ.ಡಿ.ದುರ್ವೆ, ಪಾಂಡು ಪೊಲೀಸ್, ಮಲ್ಲಪ್ಪ ಜಮಖಂಡಿ. ಫಕೀರಪ್ಪ ಮಾದರ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಸಂಶಿ ಹಾಗೂ ಸ್ಥಳೀಯ ರೈತ ಮುಖಂಡರು ಹಾಜರಿದ್ದರು.
ವರದಿ : ಬಸವರಾಜ ಪೂಜಾರಿ


