Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ, ಹೆಚ್.ಡಿ.ಕೆ ಟಿಕೆಟ್ ತ್ಯಾಗ ಮಾಡಲಿ : ಶಾಸಕ ಯತ್ನಾಳ್ 

Advertisement
ಹುಬ್ಬಳ್ಳಿ: ಚನ್ನಪಟ್ಟಣ ಉಪಚುನಾವಣೆ ಕದನ ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ. ಹಾಗಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಟಿಕೆಟ್ ತ್ಯಾಗ ಮಾಡಲಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಿ.ಪಿ.ಯೋಗೇಶ್ವರ್ ಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಸಹಾಯ ಬೇಕು.

ನಮ್ಮ ಶಕ್ತಿ ಕುಮರಸ್ವಾಮಿ ಅವರಿಗೆ ಬೇಕು. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಲೋಕಸಭೆಯಲ್ಲಿ ನಮಗೆ ಅನುಕೂಲವಾಗಿದೆ. ಜೆಡಿಎಸ್ ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ.

ಹಾಗಾಗಿ ಎರಡೂ ಕಡೆಯವರಿಗೆ ಲಾಭವಾಗಿದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎಂಬುದು ನಮ್ಮ ಒತ್ತಾಯ. ಕುಮಾರಸ್ವಾಮಿಯವರು ಟಿಕೆಟ್ ತ್ಯಾಗ ಮಾಡಬೇಕು ಎಂದರು.

ಇದೇ ವೇಳೆ ಶಿಗ್ಗಾಂವಿ ಟಿಕೆಟ್, ಸಂಸದ ಬಸವರಾಜ್ ಬೊಮ್ಮಾಯಿ ಪುತ್ರನಿಗೆ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನು ಯಾಕೆ ಎಳೆಯುತ್ತೀರಿ? ಅವರದ್ದೇನೂ ತಪ್ಪಿಲ್ಲ.

ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಮೊದಲು ಇದು ಪಾಲನೆಯಾಗಬೇಕು. ಬೊಮ್ಮಾಯಿ ಅವರನ್ನು ಯಾಕೆ ಬಲಿಪಶು ಮಾಡ್ತೀರಿ? ಎಲ್ಲರಿಗೂ ಕೊಟ್ಟಮೇಲೆ ಅವರು ತಮ್ಮ ಮಗನಿಗೆ ಟಿಕೆಟ್ ಕೇಳಿದ್ದಾರೆ. ನಮ್ಮ ಪಕ್ಷದ ಹಿರಿಯರು ಈ ಬಗ್ಗೆ ನಿರ್ಣಯ ಮಾಡುತ್ತಾರೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ