ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಶೀಘ್ರದಲ್ಲೇ ಅದನ್ನು 'ದೆಹಲಿಯಲ್ಲಿ ಅಧಿಕಾರದಿಂದ ತೆಗೆದುಹಾಕಲಾಗುವುದು' ಎಂದು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ನಡೆದ ಟಿಎಂಸಿ ಶಾಸಕರ ಸಭೆಯಲ್ಲಿ ಮಾತನಾಡಿದ ಮಮತಾ, ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಗಳು ಮತ್ತು ರಸ್ತೆಬದಿಯ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.
“ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲಾಗುತ್ತಿದೆ. ಅಂಗಡಿಗಳನ್ನು ಕೆಡವಲಾಗುತ್ತಿದೆ”.ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಚುನಾವಣೆಯ ನಂತರದ ಹಿಂಸಾಚಾರ ಮತ್ತು ಅಕ್ರಮ ಅತಿಕ್ರಮಣ ವಿರುದ್ಧ ಕ್ರಮವನ್ನು ಉಲ್ಲೇಖಿಸಿ ಹೇಳಿದರು.
“ಈ ಸರ್ಕಾರ ನಮ್ಮ ಸಾಂವಿಧಾನಿಕ ವಿಚಾರಗಳು ಮತ್ತು ಮೌಲ್ಯಗಳನ್ನು ಹಾಳು ಮಾಡುತ್ತಿದೆ” ಎಂದು ಸುವೇಂದು ಅಧಿಕಾರಿ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ ಮಮತಾ ಹೇಳಿದ್ದಾರೆ. ದೇಶದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಮುನ್ನಡೆಸುತ್ತಿರುವ ಬಿಜೆಪಿ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ. “ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕಲಾಗುವುದು” ಎಂದು ಹೇಳಿದ್ದಾರೆ.
ವ್ಯಾಪಾರಿಗಳನ್ನು ಬಲವಂತವಾಗಿ ಹೊರಹಾಕುವುದರ ವಿರುದ್ಧ ಮತ್ತು “ಬಿಜೆಪಿಯ ಬುಲ್ಡೋಜರ್ ಸಂಸ್ಕೃತಿ” ವಿರುದ್ಧ ಟಿಎಂಸಿ ಮೇ 21 ರಂದು ಸರಣಿ ಪ್ರತಿಭಟನೆಗಳನ್ನು ಪ್ರಾರಂಭಿಸಲಿದೆ.
ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಮೂರು ಸ್ಥಳಗಳಲ್ಲಿ – ಬ್ಯಾಲಿಗಂಜ್ ಬಳಿ, ಹೌರಾ ಜಂಕ್ಷನ್ ಮತ್ತು ಸೀಲ್ಡಾ ರೈಲು ನಿಲ್ದಾಣದಲ್ಲಿ ಪ್ರತಿಭಟನೆಗಳು ನಡೆಯಲಿವೆ. ಈ ಬಗ್ಗೆ ಚರ್ಚಿಸಲು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

