Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣ ರಣರಂಗವಾದ ಮದುವೆ ಮಂಟಪ!

Advertisement
ಬರೇಲಿ: ಮದುವೆ ಗಂಡು ಮಾಡಿದ ಎಡವಟ್ಟೊಂದು ಮದುವೆ ಮನೆಯಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದ್ದು, ಇಡೀ ಮದುವೆ ಮಂಟಪವೇ ರಣಾಂಗಣವಾದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಹೌದು.. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಮದುವೆಯೊಂದರಲ್ಲಿ ಮದುವೆ ಗಂಡು ಕುಡಿದು ಬಂದು ಕೋಲಾಹಲ ಸೃಷ್ಟಿಸಿದ್ದು, ವಧುವಿಗೆ ಹಾಕಬೇಕಿದ್ದ ಹಾರವನ್ನು ಆಕೆಯ ಆತ್ಮೀಯ ಗೆಳತಿಗೆ ಹಾಕಿ ಎಡವಟ್ಟು ಮಾಡಿದ್ದಾನೆ. ಈ ಘಟನೆ ಇದೀಗ ಭೀಕರ ತಿರುವು ಪಡೆದುಕೊಂಡಿದ್ದು, ಇಡೀ ಮದುವೆ ಮಂಟಪ ರಣರಂಗವಾಯಿತು.

26 ವರ್ಷದ ವರ ರವೀಂದ್ರ ಕುಮಾರ್ ಮತ್ತು 21 ವರ್ಷದ ವಧು ರಾಧಾ ದೇವಿಗೆ ವಿವಾಹ ನಿಶ್ಚಯವಾಗಿತ್ತು. ವರ ರವೀಂದ್ರ ಕುಮಾರ್ ತನ್ನ ಮದುವೆ ಮೆರವಣಿಗೆಯೊಂದಿಗೆ ಸ್ಥಳಕ್ಕೆ ತಡವಾಗಿ ಬಂದಿದ್ದ. ಅಲ್ಲದೆ ಸ್ನೇಹಿತರೊಂದಿಗೆ ಸೇರಿ ಕಂಠಪೂರ್ತಿ ಕುಡಿದಿದ್ದ. ಬಳಿಕ ಮದುವೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ವಧುವಿನ ಬದಲು ಆಕೆಯ ಪಕ್ಕದಲ್ಲಿದ್ದ ಆಕೆಯ ಆಪ್ತ ಸ್ನೇಹಿತೆಗೆ ಹೂವಿನ ಹಾರ ಹಾಕಿದ್ದಾನೆ.

ಈ ವೇಳೆ ಮದುವೆಮನೆಯಲ್ಲಿ ಗಲಾಟೆ ಏರ್ಪಟ್ಟಿದ್ದು, ವಧು ವರನಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೇ ಮದುವೆಯನ್ನೇ ರದ್ದು ಮಾಡಿದ್ದಾರೆ. ಅಲ್ಲದೆ ಸಂಬಂಧಿಕರು ಪರಸ್ಪರ ಕಿತ್ತಾಡಿಕೊಂಡಿದ್ದು, ಮಂಟಪದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ವರದಕ್ಷಿಣೆ ಗಲಾಟೆ: ಇನ್ನು ಪೊಲೀಸ್ ತನಿಖೆ ವೇಳೆ ಗಲಾಟೆಗೆ ವರ ಮಾತ್ರನಲ್ಲದೇ ಆತನ ಕುಟುಂಬಸ್ಥರೂ ಕಾರಣ ಎನ್ನಲಾಗಿದೆ. ವರನ ಕಡೆಯವರು ಹೆಚ್ಚುವರಿ ವರದಕ್ಷಿಣೆ ಕೇಳಿದ್ದರು. ಮೊದಲು 2.5ಲಕ್ಷ ಮತ್ತು ವಿವಾಹದ ದಿನ 2 ಲಕ್ಷ ರೂ ನೀಡುವುದಾಗಿ ವಧುವಿನ ಕಡೆಯವರು ಹೇಳಿದ್ದರು. ಆದರೆ ಈ ಹಣ ಸಾಕಾಗುವುದಿಲ್ಲ ಎಂದು ವರನ ಕಡೆಯವು ಗಲಾಟೆ ತೆಗೆದಿದ್ದಾರೆ. ಹೀಗಾಗಿ ವಧು ಮದುವೆ ರದ್ದು ಮಾಡಿ ಪೊಲೀಸ್ ದೂರು ನೀಡಿದ್ದಾರೆ. ಮದುವೆಗೆ ಕುಡಿದು ಬಂದಿದ್ದ ವರ ರವೀಂದ್ರ ಕುಮಾರ್ ವಧುವಿನ ಕುಟುಂಬ ಮತ್ತು ಸಂಬಂಧಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ